ಬೆಳಗಾವಿ: ಮಹಾಮಾರಿ ಕೊರೋನಾ ವೈರಸ್ ಜನ ಜೀವನದ ಮೇಲೆ ಸಾಕಷ್ಟು ಪರಿಣಾಮ ಬೀರಿದ್ದು, ನಮ್ಮ ಹಬ್ಬ, ಉತ್ಸವ ಹಾಗೂ ಆಚರಣೆಗಳ ಮೇಲಂತೂ ದೊಡ್ಡ ಪರಿಣಾಮವನ್ನೇ ಬೀರಿದೆ. ಕಳೆದ ವರ್ಷದಂತೆ ಈ ವರ್ಷವೂ ಕೂಡ ಗಣೇಶ ಚತುರ್ಥಿ ಉತ್ಸವಕ್ಕೆ ಕೊರೋನಾದ ಕರಿನೆರಳು ಬೀದಿದ್ದು, ಈ ಬಾರಿಯೂ ಸರಳವಾಗಿ ಆಚರಣೆ ಮಾಡುವ ಪರಿಸ್ಥಿತಿ ಎದುರಾಗಿದೆ.
ಸೆ.10 ರಂದು ಗಣೇಶ ಚತುರ್ಥಿಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಳಗಾವಿ ಜಿಲ್ಲಾಡಳಿತದ ಅಧಿಕಾರಿಗಳು ಹಬ್ಬದ ಆಚರಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಮಾರ್ಗಸೂಚಿಯ ಪ್ರಮುಖ ಅಂಶಗಳು ಇಂತಿವೆ...
ಬೆಳಗಾವಿ ಜಿಲ್ಲೆಯಲ್ಲಿ ಗಣೇಶ ಉತ್ಸವವನ್ನು ಪ್ರತಿ ವರ್ಷ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತದೆ. ಬೆಳಗಾವಿ ನಗರವೊಂದರಲ್ಲಿಯೇ 450ಕ್ಕೂ ಸಾರ್ವಜನಿಕ ಗಣೇಶ ಸ್ಥಾಪನೆ ಆಗುತ್ತವೆ.
ಬೆಳಗಾವಿಯಲ್ಲಿ ಗಣೇಶ ಉತ್ಸವವನ್ನು ಸ್ವತಃ ಲೋಕಮಾನ್ಯ ಬಾಲಗಂಗಾಧರ ತಿಲಕರು ಬಂದು ಆರಂಭಿಸಿದ್ದರು. ನಂತರ ವರ್ಷದಿಂದ ವರ್ಷಕ್ಕೆ ಇದು ವಿಜೃಂಭಣೆಯಿಂದ ನಡೆಯುತ್ತದೆ. ಗಣೇಶ ಉತ್ಸವ ಮೆರವಣಿಗೆ ನೋಡಲು ಲಕ್ಷಾಂತರ ಜನ ಪ್ರತಿ ವರ್ಷ ಸೇರುತ್ತಾರೆ. ಆದರೆ, ಕೋವಿಡ್ 3ನೇ ಅಲೆಯ ಕಾರಣದಿಂದ ಈ ವರ್ಷ ಸಾರ್ವಜನಿಕ ಗಣೇಶ ಉತ್ಸವ ದೇವಾಲಯಗಳಲ್ಲಿ ಆಚರಣೆ ಮಾಡಬೇಕೆಂದು ಹೇಳಿ ಅನೇಕ ಮಾರ್ಗಸೂಚಿಯನ್ನು ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಅವರು ಹೊರಡಿಸಿದ್ದಾರೆ.
Advertisement