ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ನಿರ್ವಹಣೆ ಹಾಗೂ ನೆರೆ ಹಾವಳಿ ಪರಿಹಾರ ಕೆಲಸಗಳನ್ನು ತ್ವರಿತವಾಗಿ ಪರಿಶೀಲಿಸಲು ನೂತನ ಸಚಿವರುಗಳನ್ನು ಜಿಲ್ಲೆಗಳಿಗೆ ನೇಮಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ.
ಮುಂದಿನ ಆದೇಶದವರೆಗೂ ಈ ಸಚಿವರು ಆಯಾ ಜಿಲ್ಲೆಗಳ ಕೋವಿಡ್ ನಿರ್ವಹಣೆ ಮತ್ತು ನೆರೆ ಹಾವಳಿ ಪರಿಹಾರ ಕೆಲಸಗಳನ್ನು ಪರಿಶೀಲಿಸಲಿದ್ದಾರೆ.ಈ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡುವ ಮೂಲಕ, ಹಂಚಿಕೆ ಮಾಡಲಾದ ಸಚಿವರ ಪಟ್ಟಿಯನ್ನು ಪ್ರಕಟಿಸಿದ್ದಾರೆ.
Advertisement