ರಾಮನಗರ: ಮಾಗಡಿ ಮತ್ತು ಕನಕಪುರ ತಾಲ್ಲೂಕುಗಳಲ್ಲಿ ಬುಧವಾರ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ರೈತರು ಮೃತಪಟ್ಟಿದ್ದಾರೆ.
ಮೊದಲ ಘಟನೆಯಲ್ಲಿ ಮೃತನಾದ ವ್ಯಕ್ತಿಯನ್ನು ಮಾಗಡಿ ತಾಲ್ಲೂಕಿನ ಗಂಗಾಧರ್(45) ಎಂದು ಅರಣ್ಯ ಅಧಿಕಾರಿಗಳು ಗುರುತಿಸಿದ್ದಾರೆ.
ಗಂಗಾಧರ್ ಅವರು ಅಗಲಕೋಟೆ ಹ್ಯಾಂಡ್ಪೋಸ್ಟ್ ಬಳಿ ಆನೆಗೆ ಆಹಾರ ನೀಡಲು ಯತ್ನಿಸುತ್ತಿದ್ದಾಗ, ತುಳಿತಕ್ಕೊಳಗಾಗಿ ಅಸುನೀಗಿದ್ದಾರೆ.
ಕನಕಪುರ ತಾಲ್ಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ನಡೆದ ಇನ್ನೊಂದು ಘಟನೆಯಲ್ಲಿ ರುದ್ರೇಗೌಡ ಎಂಬಾತನ ಜಮೀನಿಗೆ ನುಗ್ಗಿದ ಆನೆ ಆತನ ಮೇಲೆ ದಾಳಿ ನಡೆಸಿದಾಗ ಮೃತಪಟ್ಟಿದ್ದಾರೆ.
ಅರಣ್ಯ ಅಧಿಕಾರಿಗಳು ಆನೆಗಳನ್ನು ಮರಳಿ ಕಾಡಿಗೆ ಕಳುಹಿಸಲು ಪ್ರಯತ್ನಿಸುತ್ತಿದ್ದಾರೆ.
ಕಳೆದ ಮೂರು ವರ್ಷಗಳಲ್ಲಿ ಜಿಲ್ಲೆಯಲ್ಲಿ ಆನೆ ದಾಳಿಯಿಂದ ಸುಮಾರು 12 ರೈತರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement