ಬೆಂಗಳೂರು ನಗರದಲ್ಲಿ ಝೀರೋ ಟ್ರಾಫಿಕ್ ಸಂಚಾರ ವ್ಯವಸ್ಥೆ ಬೇಡ: ಸಿಎಂ ಬೊಮ್ಮಾಯಿ ನಿರ್ಧಾರ

ಸರ್ಕಾರಿ ಸಮಾರಂಭಗಳಲ್ಲಿ ಹಾರ-ತುರಾಯಿ ಸನ್ಮಾನ ಬೇಡ, ಸಾರ್ವಜನಿಕ ಸ್ಥಳಗಳಲ್ಲಿ ಪೊಲೀಸ್ ಗೌರವ ವಂದನೆಗೆ ಬ್ರೇಕ್ ಹಾಕಿ ಮಾದರಿಯಾಗಿದ್ದ ಸಿಎಂ ಬಸವರಾಜ ಬೊಮ್ಮಾಯಿ ಇದೀಗ ಮತ್ತೊಂದು ಪ್ರಮುಖ ನಿರ್ಧಾರ ಮಾಡಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಸರ್ಕಾರಿ ಸಮಾರಂಭಗಳಲ್ಲಿ ಹಾರ-ತುರಾಯಿ ಸನ್ಮಾನ ಬೇಡ, ಸಾರ್ವಜನಿಕ ಸ್ಥಳಗಳಲ್ಲಿ ಪೊಲೀಸ್ ಗೌರವ ವಂದನೆಗೆ ಬ್ರೇಕ್ ಹಾಕಿ ಮಾದರಿಯಾಗಿದ್ದ ಸಿಎಂ ಬಸವರಾಜ ಬೊಮ್ಮಾಯಿ ಇದೀಗ ಮತ್ತೊಂದು ಪ್ರಮುಖ ನಿರ್ಧಾರ ಮಾಡಿದ್ದಾರೆ.

ಸಾಮಾನ್ಯವಾಗಿ ಸಿಎಂ ಆದಿಯಾಗಿ ಸಚಿವರು, ರಾಜಕೀಯ ನಾಯಕರು ರಸ್ತೆಯಲ್ಲಿ ಹೋಗುವಾಗ ಝೀರೋ ಟ್ರಾಫಿಕ್ ವ್ಯವಸ್ಥೆಯಿರುತ್ತದೆ, ಆದರೆ ತಮಗೆ ಬೆಂಗಳೂರು ನಗರದಲ್ಲಿ ಆ ಸೌಲಭ್ಯ ಬೇಡ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ತಾವು ಸಂಚರಿಸುವಾಗ ಸಿಗ್ನಲ್ ಫ್ರೀ ಮಾಡಿಕೊಡಲು ಸೂಚಿಸಿರುವ ಸಿಎಂ, ತಮ್ಮ ಸಂಚಾರ ವೇಳೆ ಆಂಬ್ಯುಲೆನ್ಸ್ ಗೆ ಹೋಗಲು ಅವಕಾಶ ಮಾಡಿಕೊಡುವಂತೆ ಸೂಚಿಸಿದ್ದಾರೆ.

ಈ ಹಿಂದೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕೂಡ ತಮಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಬೇಡವೆಂದು ನಿರಾಕರಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com