ಚಿಕ್ಕಬಳ್ಳಾಪುರ: ತೀವ್ರ ಮಳೆಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಖ್ಯಾತ ನಂದಿಬೆಟ್ಟದ 10ನೇ ತಿರುವಿನಲ್ಲಿ ಭಾರೀ ಭೂಕುಸಿತ ಉಂಟಾಗಿ ರಸ್ತೆ ಸಂಚಾರಕ್ಕೆ ಬಂದ್ ಆಗಿದೆ.
ಕಳೆದ ರಾತ್ರಿಯ ತೀವ್ರ ಮಳೆಗೆ ಭೂ ಕುಸಿತ ಉಂಟಾಗಿದ್ದು ರಸ್ತೆಯ ಮೇಲೆ ಮಣ್ಣು ಬಿದ್ದು ಸದ್ಯ ಅದರ ತೆರವು ಕಾರ್ಯಾಚರಣೆ ನಡೆಯುತ್ತಿದೆ. ತಂಡವೊಂದು ಸ್ಥಳದಲ್ಲಿ ಬೀಡುಬಿಟ್ಟಿದ್ದು ಮಣ್ಣು ಕುಸಿತದ ತೆರವು ಕಾರ್ಯ ಮಾಡುತ್ತಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್ ಲತಾ ತಿಳಿಸಿದ್ದಾರೆ. ಇನ್ನು ಕೆಲವೇ ಗಂಟೆಗಳಲ್ಲಿ ತೆರವು ಕಾರ್ಯ ನಡೆಯಲಿದೆ ಎಂದು ಹೇಳಿದ್ದಾರೆ.
Advertisement