ಚಿಕ್ಕಮಗಳೂರು: ಅಕ್ರಮ-ಸಕ್ರಮ ಸಮಿತಿ ಸದಸ್ಯನ ಕಿರುಕುಳ ತಾಳಲಾರದೆ ರೆವಿನ್ಯೂ ಇನ್ಸ್ ಪೆಕ್ಟರ್ ಆತ್ಮಹತ್ಯೆ

ಅಕ್ರಮ-ಸಕ್ರಮ ಸಮಿತಿ ಸದಸ್ಯರು ಕಿರುಕುಳ ನೀಡಿದ್ದಾರೆಂದು ಆರೋಪಿಸಿ ತರಿಕೆರೆ ತಾಲೂಕಿನ ಲಕ್ಕವಳ್ಳಿ ಹೋಬಳಿಯ ರೆವಿನ್ಯೂ ಇನ್ಸ್ ಪೆಕ್ಟರ್ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಚಿಕ್ಕಮಗಳೂರು: ಅಕ್ರಮ-ಸಕ್ರಮ ಸಮಿತಿ ಸದಸ್ಯರು ಕಿರುಕುಳ ನೀಡಿದ್ದಾರೆಂದು ಆರೋಪಿಸಿ ತರಿಕೆರೆ ತಾಲೂಕಿನ ಲಕ್ಕವಳ್ಳಿ ಹೋಬಳಿಯ ರೆವಿನ್ಯೂ ಇನ್ಸ್ ಪೆಕ್ಟರ್ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರನ್ನು ಸೋಮಶೇಖರ್ ಎಂದು ಗುರುತಿಸಲಾಗಿದ್ದು, ಡೆತ್ ನೋಟ್ ಅನ್ನು ಬಿಟ್ಟು ಹೋಗಿದ್ದಾರೆ, ಕೆಲವು ಪ್ರಸಿದ್ಧ ರಾಜಕೀಯ ವ್ಯಕ್ತಿಗಳು ತಮ್ಮ ಪರವಾಗಿ ಸರ್ಕಾರದ ನಿಯಮಗಳನ್ನು ಬೈಪಾಸ್ ಮಾಡಲು ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. 

ಬಾಳೆಹೊನ್ನೂರಿನಲ್ಲಿ ಗ್ರಾಮ ಲೆಕ್ಕಿಗರಾಗಿ ಕೆಲಸ ಮಾಡುತ್ತಿದ್ದ ಸೋಮಶೇಖರ್ ಅವರಿಗೆ ಇತ್ತೀಚೆಗೆ ಕಂದಾಯ ನಿರೀಕ್ಷಕರಾಗಿ ಬಡ್ತಿ ನೀಡಲಾಗಿತ್ತು, ಅವರನ್ನು ಲಕ್ಕವಳ್ಳಿಯ ಕಂದಾಯ ವ್ಯಾಪ್ತಿಗೆ ನೇಮಿಸಲಾಯಿತು. ಸ್ಥಳೀಯ ಅಕ್ರಮ-ಸಕ್ರಮ ಸಮಿತಿಯ ಒಬ್ಬ ಧನಪಾಲ್, ಒತ್ತುವರಿ ಮಾಡಿಕೊಂಡಿದ್ದ ಹುಲ್ಲುಗಾವಲು ಪ್ರದೇಶವನ್ನು ಕ್ರಮಬದ್ಧಗೊಳಿಸಲು ಒತ್ತಾಯಿಸುತ್ತಿದ್ದಾನೆ ಎಂದು ಡೆತ್ ನೋಟ್ ನಲ್ಲಿ ಆರೋಪಿಸಿದ್ದಾರೆ . 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com