ಮೈಸೂರು ಗ್ಯಾಂಗ್ ರೇಪ್ ಪ್ರಕರಣ: 2 ಗಂಟೆಯೊಳಗೆ ನಾನು ಅಥವಾ ಪೊಲೀಸರು ಸಂಪೂರ್ಣ ಮಾಹಿತಿ ಕೊಡುತ್ತೇವೆ ಎಂದ ಗೃಹ ಸಚಿವ

ಮೈಸೂರಿನ ಪೊಲೀಸರಿಂದ ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ನಡೆಸಿದ ಆರೋಪಿಗಳನ್ನು ವಶಕ್ಕೆ ಪಡೆಯುತ್ತಿದ್ದಂತೆ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಜೊತೆ ಚರ್ಚೆ ನಡೆಸಿದ್ದಾರೆ.
ಗೃಹ ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಮೈಸೂರಿನ ಪೊಲೀಸರಿಂದ ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ನಡೆಸಿದ ಆರೋಪಿಗಳನ್ನು ವಶಕ್ಕೆ ಪಡೆಯುತ್ತಿದ್ದಂತೆ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಜೊತೆ ಚರ್ಚೆ ನಡೆಸಿದ್ದಾರೆ.

ನಂತರ ಹೊರಗೆ ಬಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಈ ಘಟನೆ ಬಗ್ಗೆ ಸಂಪೂರ್ಣ ವಿವರ ಬಂದ ಮೇಲೆ ನಿಮಗೆ ಮಾಹಿತಿ ನೀಡುತ್ತೇನೆ, 2 ಗಂಟೆಗಳಲ್ಲಿ ಮಾಹಿತಿ ನೀಡುತ್ತೇನೆ ಎಂದರು.

ಆರೋಪಿಗಳನ್ನು ವಶಕ್ಕೆ ಪಡೆದ ಬಗ್ಗೆ 2 ಗಂಟೆಯೊಳಗೆ ಪೊಲೀಸರು ಇಲ್ಲವೇ ನಾನೇ ಮಾಹಿತಿ ಕೊಡುತ್ತೇನೆ ಎಂದಷ್ಟೇ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com