ಮಂಗಳೂರು: ಲಾರಿ ರಿಪೇರಿ ಮಾಡುತ್ತಿದ್ದ ವೇಳೆ ಪಿಕಪ್ ವಾಹನ ಹರಿದು ಇಬ್ಬರು ಮೆಕ್ಯಾನಿಕ್‌ ಸಾವು

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ಲಾರಿ ರಿಪೇರಿ ಮಾಡುತ್ತಿದ್ದ ವೇಳೆ ಪಿಕಪ್ ವಾಹನ ಹರಿದು ಇಬ್ಬರು ಮೆಕ್ಯಾನಿಕ್ ಗಳು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ...
ಅಪಘಾತ ನಡೆದ ಸ್ಥಳ
ಅಪಘಾತ ನಡೆದ ಸ್ಥಳ

ಮಂಗಳೂರು: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ಲಾರಿ ರಿಪೇರಿ ಮಾಡುತ್ತಿದ್ದ ವೇಳೆ ಪಿಕಪ್ ವಾಹನ ಹರಿದು ಇಬ್ಬರು ಮೆಕ್ಯಾನಿಕ್ ಗಳು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಬಳಿ ಸೋಮವಾರ ನಡೆದಿದೆ.

ಇಂದು ಸಂಜೆ ಉಪ್ಪಿನಂಗಡಿಯ ಬೆದ್ರೋಡಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.

ಆಂಧ್ರಪ್ರದೇಶ ಮೂಲದ ಲಾರಿಯೊಂದು ಹೆದ್ದಾರಿಯಲ್ಲಿ ಕೆಟ್ಟು ನಿಂತಿತ್ತು. ಲಾರಿ ರಿಪೇರಿ ಮಾಡುವಾಗ ಆಂಧ್ರಪ್ರದೇಶದಿಂದ ಬಂದ ಇಬ್ಬರು ಮೆಕ್ಯಾನಿಕ್‌ಗಳ ಮೇಲೆ ಪಿಕಪ್ ವಾಹನ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಆಗಮಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com