social_icon

ಓಮಿಕ್ರಾನ್ ಭೀತಿ: ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ 10 ಮಂದಿ ದಕ್ಷಿಣ ಆಫ್ರಿಕಾ ಪ್ರಯಾಣಿಕರು ನಾಪತ್ತೆ!

ಬೆಂಗಳೂರಿನ ಮೂಲಕ ಭಾರತಕ್ಕೂ ಒಕ್ಕರಿಸಿರುವ ಓಮಿಕ್ರಾನ್ ರೂಪಾಂತರಿ ವೈರಸ್ ಭೀತಿ ವ್ಯಾಪಕವಾಗಿರುವಂತೆಯೇ ಇತ್ತ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ 10 ಮಂದಿ ದಕ್ಷಿಣ ಆಫ್ರಿಕಾ ಪ್ರಯಾಣಿಕರು ನಾಪತ್ತೆಯಾಗಿರುವ ಆಘಾತಕಾರಿ ಮಾಹಿತಿ ಹೊರಬಿದ್ದಿದ್ದೆ.

Published: 03rd December 2021 03:50 PM  |   Last Updated: 03rd December 2021 05:08 PM   |  A+A-


Image of Bengaluru Airport used for representational purposes (Photo | T Vinod Kumar, EPS)

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ (ಸಂಗ್ರಹ ಚಿತ್ರ)

Posted By : srinivasamurthy
Source : The New Indian Express

ಬೆಂಗಳೂರು: ಬೆಂಗಳೂರಿನ ಮೂಲಕ ಭಾರತಕ್ಕೂ ಒಕ್ಕರಿಸಿರುವ ಓಮಿಕ್ರಾನ್ ರೂಪಾಂತರಿ ವೈರಸ್ ಭೀತಿ ವ್ಯಾಪಕವಾಗಿರುವಂತೆಯೇ ಇತ್ತ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ 10 ಮಂದಿ ದಕ್ಷಿಣ ಆಫ್ರಿಕಾ ಪ್ರಯಾಣಿಕರು ನಾಪತ್ತೆಯಾಗಿರುವ ಆಘಾತಕಾರಿ ಮಾಹಿತಿ ಹೊರಬಿದ್ದಿದ್ದೆ.

ದಕ್ಷಿಣ ಆಫ್ರಿಕಾದಿಂದ ಈ ಪ್ರಯಾಣಿಕರು ನವೆಂಬರ್ 12 ಮತ್ತು 22 ರ ನಡುವೆ ಬೆಂಗಳೂರಿಗೆ ಬಂದಿದ್ದರು. ಆರೋಗ್ಯ ಇಲಾಖೆಯು ಅವರನ್ನು Covid-19 ಪರೀಕ್ಷೆಗೊಳಪಡಿಸಲು ಮುಂದಾಗಿದೆಯಾದರೂ, ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ, ಅವರ ಫೋನ್‌ಗಳು ಸ್ವಿಚ್ ಆಫ್ ಅಗಿದ್ದು, ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಅವರ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದಾರೆ. 

ಇದನ್ನೂ ಓದಿ: ಬೆಂಗಳೂರಿನ ಇಬ್ಬರಲ್ಲಿ ಓಮಿಕ್ರಾನ್ ಪತ್ತೆ: ಸೋಂಕಿತರ ಸಂಪರ್ಕಿತರ ಪತ್ತೆ, ಪರೀಕ್ಷೆಗೆ ಅಧಿಕಾರಿಗಳು ಮುಂದು!

ಈ ಕುರಿತು ಸ್ವತಃ ಆರೋಗ್ಯ ಸಚಿವ ಸುಧಾಕರ್ ಅವರೇ ಮಾಹಿತಿ ನೀಡಿದ್ದು, ನಮ್ಮ ಪೊಲೀಸ್ ವ್ಯವಸ್ಥೆ ಸಮರ್ಥವಾಗಿದೆ. ನಾಪತ್ತೆಯಾದವರ ಬಗ್ಗೆ ಶೀಘ್ರದಲ್ಲೇ ಮಾಹಿತಿ ಕಲೆಹಾಕುತ್ತೇವೆ ಎಂದು ಹೇಳಿದ್ದಾರೆ. ಇಂದು ಸುದ್ದಿಗಾರು ಕೇಳಿದ 10 ಮಂದಿ ನಾಪತ್ತೆಯಾದವರ ಕುರಿತು ಮಾತನಾಡಿದ ಅವರು, ಶೀಘ್ರದಲ್ಲೇ ನಾವು ಅವರನ್ನು ಪತ್ತೆ ಮಾಡುತ್ತೇವೆ. ನಾವು ಈ ಹಿಂದೆ ಇಂತಹ ಪರಿಸ್ಥಿತಿಗಳನ್ನು ಸಮರ್ಥವಾಗಿ ಎದುರಿಸಿದ್ದೇವೆ. ಈಗ ಇದು ನಮಗೆ ಹೊಸದೇನೂ ಅಲ್ಲ. ಈ ಹಿಂದಿನ ಪರಿಸ್ಥಿತಿಗಳಲ್ಲಿ ನಾವು ಸಾವಿರಾರು ಮಂದಿಯನ್ನು ಪತ್ತೆ ಮಾಡಿದ್ದೇವೆ. ನಮ್ಮ ಪೊಲೀಸ್ ವ್ಯವಸ್ಥೆ ಅತ್ಯಂತ ಸಮರ್ಥವಾಗಿದೆ. ಈ ಕುರಿತು ಅವರಿಗೆ ಸಾಕಷ್ಟು ಅನುಭವವಿದೆ. ಕಳೆದ ವರ್ಷ ಇಂತಹ ಸಾಕಷ್ಟು ಪ್ರಕರಣಗಳನ್ನು ಅವರು ಸಮರ್ಥವಾಗಿ ನಿಭಾಯಿಸಿದ್ದಾರೆ ಎಂದು  ಹೇಳಿದರು.

ಇದನ್ನೂ ಓದಿ: ಕೊಡಗು: ಒಂದೇ ಶಿಕ್ಷಣ ಸಂಸ್ಥೆಯ 11 ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು

ಅಂತೆಯೇ ನಾಪತ್ತೆಯಾದವರ ಕುರಿತು ಮಾತನಾಡಿದ ಸುಧಾಕರ್ ಅವರು, ನಾನು ಈ ಮೂಲಕ ಅವರಿಗೆ ಹೇಳುವುದೇನೆಂದರೆ, ಕೋವಿಡ್ ಸಂಕಷ್ಟ ಸಂದರ್ಭದಲ್ಲಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಿ. ಪ್ರಸ್ತುತ ನಿಮಗೆ ಹೇಗೆಂದರೆ ಹಾಗೆ ತಿರುಗಾಡಲು ಸ್ವತಂತ್ರವಿಲ್ಲ. ನೈತಿಕವಾಗಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಿ.. ಸರ್ಕಾರದ ನಿಯಮಗಳು ಒಬ್ಬರಿಗೆ ತೊಂದರೆ ಮಾಡಲು ಅಲ್ಲ. ಬದಲಿಗೆ ಒಬ್ಬರಿಂದ ಹತ್ತಾರು ಮಂದಿ ಸಂಕಷ್ಟಕ್ಕೀಡಾಗಬಾರದು. ಪಾಸಿಟಿವ್ ಬಂದಾಕ್ಷಣ ಮೊಬೈಲ್ ಸ್ವಿಚ್ ಮಾಡಿ ಹೇಗೆಂದರೆ ಹಾಗೆ ತಿರುಗಾಡುವುದು ಸರಿಯಲ್ಲ. ಇದರಿಂದ ಬೇರೆಯವರಿಗೂ ಸೋಂಕು ಹರಡುತ್ತದೆ. ಇದರಿಂದ ನಿಮ್ಮ ಹತ್ತಿರಿದವರಿಗೂ, ಸಂಬಂಧಿಕರಿಗೂ ಸೋಂಕು ತಗುಲುವ ಅಪಾಯವಿದೆ. ಇಂತಹ ನಡೆ ಸರಿಯಲ್ಲ. ದಯಮಾಡಿ ನೀವೇ ಸ್ವಯಂ ಪ್ರೇರಿತರಾಗಿ ಬಂದು ಕ್ವಾರಂಟೈನ್ ಆಗಿ ಪರೀಕ್ಷೆಗೊಳಪಡಬೇಕು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಓಮಿಕ್ರಾನ್ ವೈರಸ್ ಆತಂಕ: ಸಭೆ-ಸಮಾರಂಭ, ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಲು ಬಿಬಿಎಂಪಿ ಮುಂದು?

ಕೋವಿಡ್ ಚಿಕಿತ್ಸೆ ನೀಡಲಾಗದ ಸಮಸ್ಯೆ ಅಲ್ಲ. ನಮಗೆ ಅತ್ಯಂತ ಅನುಭವಿ ವೈದ್ಯರ ನೆರವಿದೆ. ಸೂಕ್ತ ಚಿಕಿತ್ಸೆಗಳು ಲಭ್ಯವಿದೆ. ಸರ್ಕಾರ ನಿಮ್ಮೊಂದಿಗೆ ನೀವಾಗಿಯೇ ಮುಂದೆ ಬಂದು ಪರೀಕ್ಷೆಗೊಳಪಡಿ ಎಂದು ಸುಧಾಕರ್ ಮನವಿ ಮಾಡಿದ್ದಾರೆ.
 


Stay up to date on all the latest ರಾಜ್ಯ news
Poll
New parliament building

ಹೊಸ ಸಂಸತ್ ಕಟ್ಟಡದ ಉದ್ಘಾಟನೆಯನ್ನು ಬಹಿಷ್ಕರಿಸುವ ಹಲವಾರು ವಿರೋಧ ಪಕ್ಷಗಳ ನಿರ್ಧಾರವು ಸಮರ್ಥನೀಯವೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp