ಅಧಿವೇಶನಕ್ಕೂ ಮುನ್ನ ಬೆಳಗಾವಿಯಲ್ಲಿ ರೈತರ ಸಮಾವೇಶ

ಗಡಿ ಜಿಲ್ಲೆಯಲ್ಲಿ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ಪ್ರಾರಂಭವಾಗುವ ಒಂದು ದಿನ ಮುನ್ನ ಅಂದರೆ ಡಿಸೆಂಬರ್ 12 ರಂದು ಬೆಳಗಾವಿಯಲ್ಲಿ ರಾಜ್ಯದ ವಿವಿಧೆಡೆಯಿಂದ ರೈತರ ಸಮಾವೇಶ ನಡೆಯಲಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಗಡಿ ಜಿಲ್ಲೆಯಲ್ಲಿ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ಪ್ರಾರಂಭವಾಗುವ ಒಂದು ದಿನ ಮುನ್ನ ಅಂದರೆ ಡಿಸೆಂಬರ್ 12 ರಂದು ಬೆಳಗಾವಿಯಲ್ಲಿ ರಾಜ್ಯದ ವಿವಿಧೆಡೆಯಿಂದ ರೈತರ ಸಮಾವೇಶ ನಡೆಯಲಿದೆ.

ಎಪಿಎಂಸಿ ತಿದ್ದುಪಡಿಗಳನ್ನು ಮತ್ತು ಭೂಸುಧಾರಣಾ ಕಾಯಿದೆ ಹಿಂಪಡೆಯುವಂತೆ ಮಾಡಲು, ಕೇಂದ್ರದಿಂದ ಭತ್ತ ಖರೀದಿ ಹೆಚ್ಚಿಸುವುದು ಹಾಗೂ ಕಳೆದ ಕೆಲವು ವಾರಗಳಲ್ಲಿ ಸಂಭವಿಸಿದ ಅತಿವೃಷ್ಟಿಯಿಂದ ಬೆಳೆ ನಷ್ಟಕ್ಕೆ ಪರಿಹಾರ ನೀಡುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಈ ಸಮಾವೇಶ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಇದಷ್ಟೇ ಅಲ್ಲದೆ, ಅಧಿವೇಶನದಲ್ಲಿ ಚುನಾಯಿತ ಪ್ರತಿನಿಧಿಗಳು ರೈತರ ಕಲ್ಯಾಣಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸುವಂತೆಯೂ ಒತ್ತಡ ಹೇರಲು ರೈತರು ನಿರ್ಧರಿಸಿದ್ದಾರೆ.

ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡ ಮತ್ತು ಸಂಯುಕ್ತ ಕಿಸಾನ್ ಮೋರ್ಚಾದ ರಾಜ್ಯ ಕೋರ್ ಕಮಿಟಿ ಸದಸ್ಯ ಟಿ ಯಶ್ವಂತ್ ಮಾತನಾಡಿ, ಇತ್ತೀಚಿನ ಮಳೆಯಿಂದಾಗಿ ರಾಜ್ಯದಾದ್ಯಂತ ರೈತರು ಸಂಕಷ್ಟದಲ್ಲಿದ್ದಾರೆ. ಬೆಳೆ ಹಾನಿ, ಹಾಲು ಒಕ್ಕೂಟಗಳು ಖರೀದಿ ದರ ಕಡಿತಗೊಳಿಸಲಾಗಿದೆ. ಸರ್ಕಾರ ರಾಜ್ಯಾದ್ಯಂತ ಭತ್ತ ಖರೀದಿ ಕೇಂದ್ರಗಳನ್ನು ತೆರೆಯದಿಲ್ಲ. ಇವೆಲ್ಲವೂ ರೈತರು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ. ಹೀಗಾಗಿ ಸರ್ಕಾರ ಈ ಎಲ್ಲ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಎಪಿಎಂಸಿ ಕಾಯ್ದೆ ಮತ್ತು ಕರ್ನಾಟಕ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com