social_icon

ಓಮಿಕ್ರಾನ್ ಸೋಂಕು ಪತ್ತೆಯಾಗಿದ್ದ ಬೆಂಗಳೂರು ವೈದ್ಯನಿಗೆ ಮತ್ತೆ ಕೋವಿಡ್ ಪಾಸಿಟಿವ್!: ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿಕೆ

ಓಮಿಕ್ರಾನ್ ಸೋಂಕು ಪೀಡಿತರಾಗಿದ್ದ ಬೆಂಗಳೂರು ವೈದ್ಯರಲ್ಲಿ ಮೊದಲ ಪರೀಕ್ಷೆಯ 15 ದಿನಗಳು ಕಳೆದರೂ ಕೋವಿಡ್-19 ಸೋಂಕು ಸಕ್ರಿಯವಾಗಿರುವುದು ಕಂಡುಬರುತ್ತಿದೆ. 

Published: 07th December 2021 09:06 AM  |   Last Updated: 07th December 2021 01:39 PM   |  A+A-


A health worker administers Covid-19 vaccine to a woman in KR Market, Bengaluru, on Friday. (Photo | Shriram BN/EPS)

ಲಸಿಕೆ ಪಡೆಯುತ್ತಿರುವ ಆರೋಗ್ಯ ಕಾರ್ಯಕರ್ತರು (ಸಂಗ್ರಹ ಚಿತ್ರ)

Posted By : srinivasrao
Source : The New Indian Express

ಬೆಂಗಳೂರು: ಓಮಿಕ್ರಾನ್ ಸೋಂಕು ಪೀಡಿತರಾಗಿದ್ದ ಬೆಂಗಳೂರು ವೈದ್ಯರಲ್ಲಿ ಮೊದಲ ಪರೀಕ್ಷೆಯ 15 ದಿನಗಳು ಕಳೆದರೂ ಕೋವಿಡ್-19 ಸೋಂಕು ಸಕ್ರಿಯವಾಗಿರುವುದು ಕಂಡುಬರುತ್ತಿದೆ. 

ಅಚ್ಚರಿಯೆಂಬಂತೆ ವೈದ್ಯರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಓರ್ವ ವ್ಯಕ್ತಿ ಹಾಗೂ ದ್ವಿತೀಯ ಸಂಪರ್ಕದ ಇಬ್ಬರಲ್ಲಿ ಸೋಂಕು ಪತ್ತೆ ಪರೀಕ್ಷೆಯಲ್ಲಿ ಕೋವಿಡ್-19 ನೆಗೆಟೀವ್ ತೋರಿಸುತ್ತಿದೆ. 

ಇದನ್ನೂ ಓದಿ: ತಜ್ಞರೊಂದಿಗೆ ಚರ್ಚಿಸಿ ಮಾಲ್, ಥಿಯೇಟರ್ ಗಳಲ್ಲಿ ಶೇ.50' ರ ಮಿತಿ ಜಾರಿ: ಸಿಎಂ ಬೊಮ್ಮಾಯಿ

ಒಮಿಕ್ರಾನ್ ಸೋಂಕು ಪತ್ತೆಯಾಗಿ 15 ದಿನಗಳು ಕಳೆದಿದ್ದ ಹಿನ್ನೆಲೆಯಲ್ಲಿ 2 ನೇ ಬಾರಿಯ ಪರೀಕ್ಷೆಯಲ್ಲಿ ನೆಗೆಟೀವ್ ವರದಿಯನ್ನು ಅರಿವಳಿಕೆ ತಜ್ಞರಾಗಿರುವ ವೈದ್ಯರು ನಿರೀಕ್ಷಿಸುತ್ತಿದ್ದರು. ಆದರೆ 2ನೇ ಬಾರಿಯೂ ಕೋವಿಡ್-19 ಸೋಂಕು ಸಕ್ರಿಯವಾಗಿರುವ ಹಿನ್ನೆಲೆಯಲ್ಲಿ ಬೋರಿಂಗ್ ಆಸ್ಪತ್ರೆಯಲ್ಲೇ ಐಸೊಲೇಷನ್ ಹಾಗೂ ಚಿಕಿತ್ಸೆಯನ್ನು ಮುಂದುವರೆಸಬೇಕಾಗಿದೆ. 

ವೈದ್ಯರಿಂದ ಸಂಗ್ರಹಿಸಲಾದ ಮಾದರಿಗಳನ್ನು ಮತ್ತೊಮ್ಮೆ ಪರೀಕ್ಷೆಗಾಗಿ 24 ಗಂಟೆಗಳ ನಂತರ ಕಳಿಸಲಾಗುತ್ತದೆ. ಸೋಮವಾರ ನೆಗೆಟೀವ್ ವರದಿ ಪಡೆದಿದ್ದವರನ್ನೂ ಮತ್ತೊಮ್ಮೆ ಪರೀಕ್ಷೆಗೊಳಪಡಿಸಲಾಗುತ್ತದೆ ಎಂದು ಹಿರಿಯ ವೈದ್ಯರೊಬ್ಬರು ಮಾಹಿತಿ ನೀಡಿದ್ದಾರೆ. 

ಇದನ್ನೂ ಓದಿ: ಓಮಿಕ್ರಾನ್ ಭೀತಿ: 40 ಹಾಗೂ ಮೇಲ್ಪಟ್ಟ ವಯಸ್ಸಿನವರಿಗೆ ಬೂಸ್ಟರ್ ಡೋಸ್ ಲಸಿಕೆಗೆ ಭಾರತೀಯ ವಿಜ್ಞಾನಿಗಳ ಶಿಫಾರಸು

ವೈದ್ಯರು ಹಾಗೂ ಅವರ ಸಂಪರ್ಕಿತರು ನೆಗೆಟೀವ್ ವರದಿ ದೃಢಪಡುವವರೆಗೆ ಐಸೊಲೇಷನ್ ಹಾಗೂ ಚಿಕಿತ್ಸೆಯನ್ನು ಮುಂದುವರೆಸಬೇಕಾಗುತ್ತದೆ. ಓಮಿಕ್ರಾನ್ ಪೀಡಿತ ವೈದ್ಯರು ಹಾಗೂ ಅವರ ಸಹೋದ್ಯೋಗಿಗಳಿಗೆ ರಕ್ತದೊತ್ತಡ ಹಾಗೂ ಆಕ್ಸಿಜನ್ ಮಟ್ಟ ಹಾಗೂ ಇತರೆ ಪ್ರಮುಖ ಆರೋಗ್ಯ ಅಂಶಗಳು ಸಹಜವಾಗಿದೆ.

ವೈದ್ಯರಿಗೆ ಮಧುಮೇಹ ಇದ್ದು, ಇನ್ನೂ ಪಾಸಿಟೀವ್ ಬರುತ್ತಿರುವುದಕ್ಕೆ ಇದೂ ಒಂದು ಕಾರಣ ಇರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ಡೆಲ್ಟಾ ಹಾಗೂ ಇನ್ನಿತರ ರೂಪಾಂತರಿ ಸೋಂಕು ಪ್ರಕರಣಗಳಲ್ಲಿಯೂ ಈ ರೀತಿ ಆಗಿರುವ ಉದಾಹರಣೆಗಳಿವೆ. ಹಲವರಿಗೆ ಚಿಕಿತ್ಸೆಯ 21 ದಿನಗಳ ನಂತರ ಪಾಸಿಟೀವ್ ಬಂದಿರುವ ಉದಾಹರಣೆಗಳೂ ಇವೆ ಎಂದು ವೈದ್ಯರೊಬ್ಬರು ವಿವರಿಸಿದ್ದಾರೆ. 


Stay up to date on all the latest ರಾಜ್ಯ news
Poll
K Annamalai

ಎನ್‌ಡಿಎಯಿಂದ ಹೊರಬರುವ ಎಐಎಡಿಎಂಕೆ ನಿರ್ಧಾರವು 2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷದ ಸಾಧನೆ ಮೇಲೆ ಪರಿಣಾಮ ಬೀರಲಿದೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp