ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ಕಾನೂನು ಸೇವಾ ಕ್ಲಿನಿಕ್!

ನಗರದ ನಿವಾಸಿಗಳು ಶೀಘ್ರದಲ್ಲೇ ತಮ್ಮ ಖಾತೆಯನ್ನು ಸಮಂಜಸವಾದ ಸಮಯದಲ್ಲಿ ಪೂರ್ಣಗೊಳಿಸುವ ಸಲುವಾಗಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಕಾನೂನು ಸೇವಾ ಕ್ಲಿನಿಕ್ ಗಳನ್ನು ಆರಂಭಿಸಲಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ನಗರದ ನಿವಾಸಿಗಳು ಶೀಘ್ರದಲ್ಲೇ ತಮ್ಮ ಖಾತೆಯನ್ನು ಸಮಂಜಸವಾದ ಸಮಯದಲ್ಲಿ ಪೂರ್ಣಗೊಳಿಸುವ ಸಲುವಾಗಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಕಾನೂನು ಸೇವಾ ಕ್ಲಿನಿಕ್ ಗಳನ್ನು ಆರಂಭಿಸಲಿದೆ.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು (KSLSA) ನಾಗರಿಕರ ನಿಜವಾದ ಕುಂದುಕೊರತೆಗಳನ್ನು ಪರಿಹರಿಸಲು ಹೊಸ ಪರಿಕಲ್ಪನೆಯನ್ನು ಹೊರತಂದಿದೆ. ಕೆಎಸ್‌ಎಲ್‌ಎಸ್‌ಎ 'ಕಾನೂನು ಸೇವಾ ಕ್ಲಿನಿಕ್ ಗಳನ್ನು' ಹೊರತಂದಿದ್ದು,  ಈ ಕಾನೂನು ಸೇವಾ ಕ್ಲಿನಿಕ್ ಗಳು ವಿದ್ಯುತ್ ಮತ್ತು ನೀರು ಸರಬರಾಜು ಸಮಸ್ಯೆಗಳ ಕುಂದುಕೊರತೆಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ. ಇದನ್ನು ನಗರದ ಪ್ರತಿ ವಾರ್ಡ್‌ನಲ್ಲಿ ಸ್ಥಾಪಿಸಲು ಯೋಜಿಸಲಾಗುತ್ತಿದೆ.

ಈ ಕ್ಲಿನಿಕ್‌ಗಳನ್ನು ವಕೀಲರು, ಕಾನೂನು ವಿದ್ಯಾರ್ಥಿಗಳು, ಕೆಎಸ್‌ಎಲ್‌ಎಸ್‌ಎ ನೇಮಿಸಿದ ಪ್ಯಾರಾ-ಲೀಗಲ್ ಸ್ವಯಂಸೇವಕರು ನಿರ್ವಹಿಸುತ್ತಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಮಂಗಳವಾರ ‘ಕಾನೂನು ಸೇವಾ ಚಿಕಿತ್ಸಾಲಯ’ ಸ್ಥಾಪನೆಯನ್ನು ಪ್ರಕಟಿಸಿದ ಕೆಎಸ್‌ಎಲ್‌ಎಸ್‌ಎ ಕಾರ್ಯಾಧ್ಯಕ್ಷ ನ್ಯಾಯಮೂರ್ತಿ ಬಿ ವೀರಪ್ಪ ಅವರು ಮಾತನಾಡಿ, ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್‌ಸಿಸಿ) ಮಾದರಿಯಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ಕರ್ನಾಟಕ ಕಾನೂನು ಸೇವಾ ಕೆಡೆಟ್ ಕಾರ್ಪ್ಸ್’ನಿಂದ ತರಬೇತಿ ನೀಡಲಾಗುವುದು ಎಂದು ಹೇಳಿದರು. ಈ ಕಾನೂನು ಚಿಕಿತ್ಸಾಲಯಗಳು ಬಿಬಿಎಂಪಿಯ ನೋಡಲ್ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸುವ ಮೂಲಕ ಕುಂದುಕೊರತೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುತ್ತವೆ ಎಂದು ಅವರು ಹೇಳಿದರು. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com