ಕೋಲಾರ: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿರುವ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಆರ್. ಎಲ್ ಜಾಲಪ್ಪ ಆರೋಗ್ಯ ಸ್ಥಿತಿ ಗಂಭಿರವಾಗಿದೆ.
ಸದ್ಯ ಅವರು ತಮ್ಮದೇ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ವೈದ್ಯರು ಹೇಳಿದ್ದಾರೆ. ರಾಮಕೃಷ್ಣ ಹೆಗಡೆ ಅವರ ಕಟ್ಟಾ ಅನುಯಾಯಿಯಾಗಿ ಗುರುತಿಸಿಕೊಂಡು ದೇವೇಗೌಡರಿಂದ ಅಂತರ ಕಾಯ್ದುಕೊಂಡು, ರಾಜಕಾರಣ ನಡೆಸಿದ್ದರು.
ನಾಲ್ಕು ಬಾರಿ ಸಂಸತ್ ಸದಸ್ಯರಾಗಿ, ನಂತರ ಹಿಂದುಳಿದ ವರ್ಗಗಳ ನಾಯಕರಾಗಿ ರಾಜ್ಯದ ಗೃಹಖಾತೆ ಹಾಗೂ ಕಂದಾಯ ಸಚಿವರಾಗಿದ್ದರು. ಗೃಹ ಸಚಿವರಾಗಿದ್ದಾಗ ಕೇರಳದ ಮೂಲದ ವಕೀಲ ರಶೀದ್ ಕೊಲೆ ಪ್ರಕರಣ ಬೆಳಕಿಗೆ ಬಂದ ನಂತರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ನಂತರ ನಡೆದ ಸಂಸತ್ ಚುನಾವಣೆಯಲ್ಲಿ ಗೆಲುವು ದಾಖಲಿಸಿದ್ದರು.
Advertisement