ಮಂಗಳೂರು: ಮಂಗಳೂರು ನಗರ ಪಾಲಿಕೆಯ ಜಲಸಿರಿ ಯೋಜನೆಯ ಕಾಮಗಾರಿ ವೇಳೆ ಕಾಂಪೌಂಡ್ ಗೋಡೆ ಕುಸಿದು ಬಿದ್ದು ನಿರ್ಮಾಣ ಕಾರ್ಮಿಕ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದೆ. ಅವಶೇಷಗಳಡಿಯಲ್ಲಿ ಸಿಲುಕಿ ಹಾಕಿಕೊಂಡಿದ್ದ ಮಹಿಳೆಯ ಮಗುವನ್ನು ರಕ್ಷಿಸಲಾಯಿತು.
ಮಂಗಳೂರಿನ ಬಂದೇಲ್ ಬಳಿಯ ಕೃಷ್ಣ ನಗರದಲ್ಲಿ ಈ ಘಟನೆ ನಡೆದಿದೆ. ಮೃತ ಮಹಿಳೆಯನ್ನು 42 ವರ್ಷದ ತಿಮ್ಮಕ್ಕ ಎಂದು ಗುರುತಿಸಲಾಗಿದ್ದು ಕಾಂಪೌಂಡ್ ಗೋಡೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
Advertisement