ರಾಜ್ಯದ ಎಲ್ಲ ಲಂಬಾಣಿ ತಾಂಡಾಗಳನ್ನ ಕಂದಾಯ ಗ್ರಾಮಗಳಾಗಿ ಮಾಡಲು ಕ್ರಮ: ಆರ್ ಅಶೋಕ್

ರಾಜ್ಯದ ಎಲ್ಲ ಲಂಬಾಣಿ ತಾಂಡಾಗಳನ್ನ ಕಂದಾಯ ಗ್ರಾಮಗಳಾಗಿ ಮಾಡಲಾಗುವುದು ಕಂದಾಯ ಸಚಿವ ಆರ್ ಅಶೋಕ್ ಅವರು ಮಂಗಳವಾರ ವಿಧಾನ ಪರಿಷತ್ ಗೆ ತಿಳಿಸಿದ್ದಾರೆ.
ಆರ್ ಅಶೋಕ್
ಆರ್ ಅಶೋಕ್

ಬೆಳಗಾವಿ: ರಾಜ್ಯದ ಎಲ್ಲ ಲಂಬಾಣಿ ತಾಂಡಾಗಳನ್ನ ಕಂದಾಯ ಗ್ರಾಮಗಳಾಗಿ ಮಾಡಲಾಗುವುದು ಕಂದಾಯ ಸಚಿವ ಆರ್ ಅಶೋಕ್ ಅವರು ಮಂಗಳವಾರ ವಿಧಾನ ಪರಿಷತ್ ಗೆ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಇಂದು ಶೂನ್ಯ ವೇಳೆಯಲ್ಲಿ ವಿಧಾನ ಪರಿಷತ್ ಸದಸ್ಯ ಪ್ರಕಾಶ್ ಕೆ.ರಾಠೋಡ್ ಅವರು ಲಂಬಾಣಿ ತಾಂಡಾಗಳಲ್ಲಿ ಸುಸಜ್ಜಿತ ಸರ್ಕಾರಿ ಶಾಲೆಗಳನ್ನು ತೆರೆಯಬೇಕು, ಮೂಲಭೂತ ಸೌಕರ್ಯ ಒದಗಿಸಬೇಕು. ಈ ಬಗ್ಗೆ ಕಂದಾಯ ಸಚಿವರು ಉತ್ತರ ನೀಡಬೇಕೆಂದು ಆಗ್ರಹಿಸಿದರು.

ಲಂಬಾಣಿ ಜನಾಂಗದವರು ಅಲೆಮಾರಿ ಜೀವನ ನಡೆಸುವವರು. ಅವರು ಒಂದು ಕಡೆಯಿಂದ ಮತ್ತೊಂದು ಕಡೆಗೆ ಸಾಗುತ್ತಿರುತ್ತಾರೆ. ಈಗೀಗ ಅವರು ಒಂದು ಕಡೆ ಭದ್ರವಾಗಿ ಜೀವನ ನಡೆಸಲು ಪ್ರಾರಂಭಿಸಿದ್ದಾರೆ, ರಾಜ್ಯದ ಹಲವು ಜಿಲ್ಲೆಗಳಲ್ಲಿರುವ ಎಲ್ಲಾ ಲಂಬಾಣಿ ತಾಂಡಗಳನ್ನ ಕಂದಾಯ ಗ್ರಾಮಗಳಾಗಿ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್‌ ಅವರು ಉತ್ತರ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com