ಆರ್. ಅಶೋಕ್
ಆರ್. ಅಶೋಕ್

1.3 ಲಕ್ಷ ಎಕರೆ ಭೂಮಿ ಒತ್ತುವರಿ ತೆರವುಗೊಳಿಸಲಾಗುವುದು: ಕಂದಾಯ ಸಚಿವ ಆರ್ ಅಶೋಕ್

‘ನವೆಂಬರ್‌ವರೆಗೆ 2.7 ಲಕ್ಷ (2,70,108) ಎಕರೆ ಸರ್ಕಾರಿ ಭೂಮಿ ಒತ್ತುವರಿ ತೆರವು ಮಾಡಲಾಗಿದ್ದು, 1.36 ಲಕ್ಷ ಎಕರೆ (1,36,109) ಭೂಮಿ ತೆರವು ಬಾಕಿ ಉಳಿದಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಬುಧವಾರ ಮಾಹಿತಿ ನೀಡಿದರು.

ಬೆಳಗಾವಿ: ‘ನವೆಂಬರ್‌ವರೆಗೆ 2.7 ಲಕ್ಷ (2,70,108) ಎಕರೆ ಸರ್ಕಾರಿ ಭೂಮಿ ಒತ್ತುವರಿ ತೆರವು ಮಾಡಲಾಗಿದ್ದು, 1.36 ಲಕ್ಷ ಎಕರೆ (1,36,109) ಭೂಮಿ ತೆರವು ಬಾಕಿ ಉಳಿದಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಬುಧವಾರ ಮಾಹಿತಿ ನೀಡಿದರು.

ಈ ಕುರಿತು ವಿಧಾನ ಪರಿಷತ್‍ನಲ್ಲಿ ಕಂದಾಯ ಸಚಿವ ಆರ್. ಅಶೋಕ ಅವರು ಡಾ. ವೈ.ಎ. ನಾರಾಯಣಸ್ವಾಮಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸವಿವರವಾಗಿ ಉತ್ತರ ನೀಡಿದರು.

ಬೆಂಗಳೂರು ನಗರ ಜಿಲ್ಲೆಯಲ್ಲಿ 14,660 ಪ್ರಕರಣಗಳಲ್ಲಿ 38,888 ಎಕರೆ ಸರಕಾರಿ ಜಮೀನನ್ನು ಖಾಸಗಿಯವರು ಅತಿಕ್ರಮಿಸಿಕೊಂಡಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 38,546 ಪ್ರಕರಣಗಳಲ್ಲಿ 36,229 ಎಕರೆ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಜನರು ಅತಿಕ್ರಮಿಸಲ್ಪಟ್ಟ ಗೋಮಾಳ ಮತ್ತು ಸರಕಾರಿ ಜಮೀನುಗಳ ಪೈಕಿ ಬೆಂಗಳೂರು ನಗರ ಜಿಲ್ಲೆಯಲ್ಲಿ 4,940 ಪ್ರಕರಣಗಳಲ್ಲಿ 16,420 ಎಕರೆ, ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ 10,892 ಪ್ರಕರಣಗಳಲ್ಲಿ 11,779 ಎಕರೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವಿವರಿಸಿದರು.

ಬೆಂಗಳೂರು ಜಿಲ್ಲಾಧಿಕಾರಿಗೆ ಪ್ರತಿ ಶನಿವಾರ ಒತ್ತುವರಿ ಪ್ರಕರಣಗಳ ಪರಿಶೀಲನೆ ಜವಾಬ್ದಾರಿ ವಹಿಸಲಾಗಿದೆ. ಸರ್ಕಾರಿ ಜಮೀನುಗಳ ಒತ್ತುವರಿಯನ್ನು ತೆರವುಗೊಳಿಸಲು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಡಿಸಿ ಅವರ ಅಧ್ಯಕ್ಷತೆಯಲ್ಲಿ ಕಾರ್ಯಪಡೆಗಳನ್ನು ರಚಿಸಲಾಗಿರುವುದನ್ನು ಹಾಗೂ ಸಮಿತಿಗಳು ಕಾರ್ಯ ಪ್ರವೃತ್ತರಾಗಿರುವುದನ್ನು ಸದನದ ಗಮನಕ್ಕೆ ತಂದ ಸಚಿವ ಅಶೋಕ ಅವರು, ಬೆಂಗಳೂರು ನಗರದಲ್ಲಿ ಅಪಾರ ಪ್ರಮಾಣದಲ್ಲಿ ಒತ್ತುವರಿಯಾಗಿರುವ ಸರ್ಕಾರಿ ಜಮೀನನ್ನು ವಶಕ್ಕೆ ಪಡೆದುಕೊಳ್ಳುವ ನಿಟ್ಟಿನಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಪ್ರತಿ ಶನಿವಾರ ಈ ಒತ್ತುವರಿ ಪ್ರಕರಣಗಳ ಪರಿಶೀಲನೆ ಮತ್ತು ವಶಕ್ಕೆ ಪಡೆದುಕೊಳ್ಳುವುದಕ್ಕೆ ಸಂಬಂಧಿಸಿದ ಜವಾಬ್ದಾರಿಗಳನ್ನು ವಹಿಸಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಒಟ್ಟು 62,72,811 ಎಕರೆ ಸರ್ಕಾರಿ ಜಮೀನು ಇದೆ. ಇದರಲ್ಲಿ ಒಟ್ಟು 14,27,195 ಎಕರೆ ಸರ್ಕಾರಿ ಜಮೀನು ಒತ್ತುವರಿಯಾಗಿದೆ. ವಿವಿಧ ನ್ಯಾಯಾಲಯಗಳಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ಒಟ್ಟು 9,732 ಎಕರೆ, ಅಕ್ರಮ-ಸಕ್ರಮ ಯೋಜನೆ ಅಡಿ ಅರ್ಜಿ ಸಲ್ಲಿಸಿದ 9,97,198 ಎಕರೆ ಹಾಗೂ ಸಾರ್ವಜನಿಕ ಉದ್ದೇಶಗಳಿಗೆ ಬಳಕೆಯಾಗಿರುವ 14,048 ಎಕರೆ ಸರ್ಕಾರಿ ಜಮೀನು ಹೊರತುಪಡಿಸಿ 4,06,217 ಎಕರೆ ಒತ್ತುವರಿ ಜಮೀನು ತೆರವುಗೊಳಿಸಬೇಕಾಗಿದೆ. ಇದರಲ್ಲಿ 2021ರ ನವೆಂಬರ್ 30ರವರೆಗೆ 2,70,108 ಎಕರೆ ಸರಕಾರಿ ಜಮೀನು ತೆರವುಗೊಳಿಸಲಾಗಿದೆ. ಉಳಿದಂತೆ 1,36,109 ಎಕರೆ ಒತ್ತುವರಿ ತೆರವುಗೊಳಿಸಲು ಬಾಕಿ ಇದ್ದು, ಹಂತಹಂತವಾಗಿ ತೆರವುಗೊಳಿಸಲು ಕ್ರಮ ವಹಿಸಲಾಗುವುದು ಎಂದರು.

ಒತ್ತುವರಿ ಪ್ರಕರಣಗಳ ತಡೆಗೆ ಕರ್ನಾಟಕ ಭೂಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ ಸ್ಥಾಪನೆ: ಒತ್ತುವರಿ ಪ್ರಕರಣಗಳನ್ನು ಸಮರ್ಥವಾಗಿ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕರ್ನಾಟಕ ಭೂಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವನ್ನು ರಚಿಸಲಾಗಿದೆ.

ಒತ್ತುವರಿದಾರರ ವಿರುದ್ಧ ಕರ್ನಾಟಕ ಭೂಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದಲ್ಲಿ 20,841 ಪ್ರಕರಣಗಳನ್ನು ದಾಖಲಿಸಲಾಗಿದ್ದು 4,712 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. 16,129 ಪ್ರಕರಣಗಳು ಬಾಕಿ ಇವೆ. 61 ಜನರಿಗೆ ಒಂದು ವರ್ಷದಂತೆ ಶಿಕ್ಷೆ ವಿಧಿಸಲಾಗಿದೆ ಎಂದು ಮಾಹಿತಿ ನೀಡಿದರು.

Related Stories

No stories found.

Advertisement

X
Kannada Prabha
www.kannadaprabha.com