ನೃಪತುಂಗ ವಿವಿಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟ

ಹೊಸದಾಗಿ ಸ್ಥಾಪಿಸಲಾಗಿರುವ ನೃಪತುಂಗ ವಿಶ್ವವಿದ್ಯಾಲಯವು ತರಗತಿಗೆ ಹಾಜರಾಗಲು ದೂರದಿಂದ ಪ್ರಯಾಣ ಮಾಡುವ ಕಾಲೇಜು ವಿದ್ಯಾರ್ಥಿಗಳಿಗೆ ಮುದ್ದೆ, ಅನ್ನ ಸಾಂಬಾರ್‌ ಊಟವನ್ನು ಉಚಿತವಾಗಿ ನೀಡಲು ನಿರ್ಧರಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಹೊಸದಾಗಿ ಸ್ಥಾಪಿಸಲಾಗಿರುವ ನೃಪತುಂಗ ವಿಶ್ವವಿದ್ಯಾಲಯವು ತರಗತಿಗೆ ಹಾಜರಾಗಲು ದೂರದಿಂದ ಪ್ರಯಾಣ ಮಾಡುವ ಕಾಲೇಜು ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಮುದ್ದೆ, ಅನ್ನ ಸಾಂಬಾರ್‌ ಊಟವನ್ನು ಉಚಿತವಾಗಿ ನೀಡಲು ನಿರ್ಧರಿಸಿದೆ.

ನೃಪತುಂಗ ವಿಶ್ವವಿದ್ಯಾನಿಲಯವು(ಹಿಂದೆ ಸರ್ಕಾರಿ ವಿಜ್ಞಾನ ಕಾಲೇಜು) ದೂರದಿಂದ ಬರುವ 250 ಪದವಿಪೂರ್ವ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳನ್ನು ಗುರುತಿಸಿದ್ದು, ಅವರಿಗೆ ಬುಧವಾರದಿಂದ ಮಧ್ಯಾಹ್ನದ ಊಟ ನೀಡಲಾಗುತ್ತಿದೆ.

ವಿದ್ಯಾರ್ಥಿಗಳಿಗೆ ಸಾಮಾನ್ಯ ವಿರಾಮದ ಸಮಯದಲ್ಲಿ 11:45 ರಿಂದ ಊಟ ಪಡೆಯಲು ಕೂಪನ್ ಅನ್ನು ನೀಡಲಾಗುತ್ತದೆ. ಕುತೂಹಲಕಾರಿ ವಿಷಯವೆಂದರೆ, ಈ ಊಟಕ್ಕೆ ಉಪನ್ಯಾಸಕರಿಂದ ಹೆಚ್ಚಿನ ಹಣ ಸಂಗ್ರಹಿಸಲಾಗುತ್ತಿದೆ.

ಪ್ರತಿ ಶಿಕ್ಷಕರು ಮೂರು ತಿಂಗಳು ಅಥವಾ ಒಂದು ಸೆಮಿಸ್ಟರ್ ಅವಧಿಯ ಉಟಕ್ಕೆ ರೂ 5,000 ದಿಂದ ರೂ 15,000 ರವರೆಗೆ ನೀಡುತ್ತಿದ್ದಾರೆ. ಇತರರಿಂದ ಹೆಚ್ಚಿನ ಹಣ ಬಂದರೆ, ಪ್ರಯೋಜನ ಪಡೆಯುವ ವಿದ್ಯಾರ್ಥಿಗಳ ಸಂಖ್ಯೆಯೂ ಹೆಚ್ಚಾಗುವ ಸಾಧ್ಯತೆ ಇದೆ.

ಸಂಸ್ಥೆಯು ಇಂತಹ ಕಾರ್ಯಕ್ರಮ ನಡೆಸುತ್ತಿರುವುದು ಇದೇ ಮೊದಲಲ್ಲ. ಪ್ರತಿ ವರ್ಷ, ಲಭ್ಯವಿರುವ ನಿಧಿಯ ಆಧಾರದ ಮೇಲೆ ಸುಮಾರು 300-500 UG ಮತ್ತು PG ವಿದ್ಯಾರ್ಥಿಗಳನ್ನು ಗುರುತಿಸಲಾಗುತ್ತದೆ ಎಂದು ನೃಪತುಂಗ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಕವಿತಾ ಕೆ.ಆರ್. ಅವರು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com