ಕೋವಿಡ್-19: ರಾಜ್ಯದಲ್ಲಿ ಇಂದು 299 ಹೊಸ ಸೋಂಕು ಪ್ರಕರಣ, 2 ಸಾವು ವರದಿ

ರಾಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕದ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 299 ಹೊಸ ಸೋಂಕು ಪ್ರಕರಣಗಳು ಮತ್ತು 4 ಸಾವು ವರದಿಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕದ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 299 ಹೊಸ ಸೋಂಕು ಪ್ರಕರಣಗಳು ಮತ್ತು 4 ಸಾವು ವರದಿಯಾಗಿದೆ.

ಈ ಬಗ್ಗೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಅವರು ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದು, ಇಂದು ಒಟ್ಟು 299 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು,  ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಕೋವಿಡ್ ಗೆ ಬಲಿಯಾದವರ ಸಂಖ್ಯೆ 38301ಕ್ಕೆ ಏರಿಕೆಯಾಗಿದೆ. 

ರಾಜಧಾನಿ ಬೆಂಗಳೂರು ನಗರವೊಂದರಲ್ಲಿಯೇ 210 ಮಂದಿ ಸೋಂಕಿತರು ಪತ್ತೆಯಾಗಿದ್ದು, ಸೋಂಕಿನಿಂದ ನಗರದಲ್ಲಿ ಓರ್ವ ರೋಗಿ ಸಾವನ್ನಪ್ಪಿದ್ದಾರೆ. ಇನ್ನು ರಾಜ್ಯಾದ್ಯಂತ ಇಂದು 318 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ರಾಜ್ಯದಲ್ಲಿ ಗುಣಮುಖರ ಸಂಖ್ಯೆ 2958117ಕ್ಕೇರಿದೆ. ಪ್ರಸ್ತುತ ರಾಜ್ಯದಲ್ಲಿ 7117 ಸಕ್ರಿಯ ಪ್ರಕರಣಗಳಿವೆ.

ಅಂತೆಯೇ ಇಂದು ರಾಜ್ಯದಲ್ಲಿ 12 ಹೊಸ ಓಮಿಕ್ರಾನ್ ಸೋಂಕಿತರು ಪತ್ತೆಯಾಗಿದ್ದು, ಆ ಮೂಲಕ ರಾಜ್ಯದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಪ್ರಸ್ತುತ ಪಾಸಿಟಿವಿಟಿ ದರ ಶೇ.0.23ರಷ್ಟಿದ್ದು, ಮರಣ ಪ್ರಮಾಣ ಶೇ.0.66ರಷ್ಟಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com