ಬೆಳಗಾವಿ: ರಾಜ್ಯಸಭೆಯ ಮಾಜಿ ಸದಸ್ಯರಾದ ಕೆ.ಆರ್.ಜಯದೇವಪ್ಪ ಅವರು ವಯೋ ಸಹಜ ನಿನ್ನೆ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮೃತ ಹಿರಿಯ ಗಣ್ಯರಿಗೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಲಾಯಿತು.
ಕೆ.ಆರ್.ಜಯದೇವಪ್ಪ ಅವರು, ಮೂಲತಃ ದಾವಣಗೆರೆಯವರು. ವೃತ್ತಿಯಲ್ಲಿ ವಕೀಲರಾಗಿದ್ದರು. ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಜಯದೇವಪ್ಪ ಅವರು ಅಪಾರ ಸೇವೆ ಸಲ್ಲಿಸಿದ್ದಾರೆ. 1992 ರಿಂದ 1998ರ ಅವಧಿಯಲ್ಲಿ ರಾಜ್ಯಸಭಾ ಸದಸ್ಯರಾಗಿಯೂ ಕೊಡುಗೆ ನೀಡಿದ್ದಾರೆ ಎಂದು ಸಭಾಧ್ಯಕ್ಷರು ಸಂತಾಪ ಸೂಚಿಸಿದರು.
ಧಾರ್ಮಿಕ, ರಾಜಕೀಯ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಸಿರುವ ಕೆ.ಆರ್.ಜಯದೇವಪ್ಪ ಅವರ ಅಂತ್ಯ ಸಂಸ್ಕಾರ, ಇಂದು ಮಧ್ಯಾಹ್ನ ಬಾಡದಿಂದ ಕಂದಲ್ ಗೆ ಹೋಗುವ ರಸ್ತೆಯ ಅವರ ತೋಟದಲ್ಲಿ ನೆರವೇರಿಸಲಾಗುತ್ತದೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.
Advertisement