
ಸಾಂದರ್ಭಿಕ ಚಿತ್ರ
ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಮೂರನೇ ಮಹಡಿಯಿಂದ ತಳ್ಳಿ ಕೊಲೆ ಮಾಡಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಾದನಾಯಕನಹಳ್ಳಿ ನಿವಾಸಿ ಸಿದ್ದನಹೊಸಹಳ್ಳಿಯ ಚೈತ್ರ (20) ಮೃತಪಟ್ಟವರು. ಕೊಲೆ ಆರೋಪಿ ಪತಿ ಕಾಂತರಾಜುನನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಕಾಂತರಾಜು ಮೃತ ಚೈತ್ರ ಕಳೆದ 2 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದು ಇತ್ತೀಚೆಗೆ ದಂಪತಿ ನಡುವೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವಿರಸ ಮೂಡಿತ್ತು. ಪತ್ನಿಯ ಮೇಲೆ ದ್ವೇಷದಿಂದ ತಾವು ಬಾಡಿಗೆ ಮನೆಯಲ್ಲಿ ವಾಸವಿದ್ದ ಕಟ್ಟಡದ ಮೇಲಿಂದ ತಳ್ಳಿ ಪತಿ ಕೊಲೆ ಮಾಡಿದ್ದಾನೆ ಆರೋಪಿಸಲಾಗಿದೆ. ಆರೋಪಿ ಕಾಂತರಾಜುನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.