ವಿದ್ಯಾರ್ಥಿಗಳು ಕಂಡಲ್ಲಿ ಬಸ್ ನಿಲ್ಲಿಸಲು, ಸಹಾನುಭೂತಿಯಿಂದ ನೋಡುವಂತೆ ಚಾಲಕರಿಗೆ ಸೂಚನೆ ನೀಡಿ: ಸವದಿಗೆ ಸುರೇಶ್ ಕುಮಾರ್ ಪತ್ರ
ಶಾಲಾ-ಕಾಲೇಜು ವಿದ್ಯಾರ್ಥಿಗಳು ಕಂಡಲ್ಲಿ ಬಸ್'ಗೆ ಹತ್ತಿಸಿಕೊಳ್ಳುವಂತೆ, ಪಾಸ್ ಹೊಂದಿರುವ ವಿದ್ಯಾರ್ಥಿಗಳ ಜೊತೆ ಸೌಜನ್ಯದಿಂದ ವರ್ತಿಸುವಂತೆ ಚಾಲಕ ಹಾಗೂ ನಿರ್ವಾಹಕರಿಗೆ ನಿರ್ದೇಶನ ನೀಡುವಂತೆ ಸಾರಿಗೆ ಸಚಿವ ಲಕ್ಷ್ಮಣ ಸವದಿಯವರಿಗೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ.
Published: 12th January 2021 07:21 AM | Last Updated: 12th January 2021 07:49 AM | A+A A-

ಸುರೇಶ್ ಕುಮಾರ್
ಬೆಂಗಳೂರು: ಶಾಲಾ-ಕಾಲೇಜು ವಿದ್ಯಾರ್ಥಿಗಳು ಕಂಡಲ್ಲಿ ಬಸ್'ಗೆ ಹತ್ತಿಸಿಕೊಳ್ಳುವಂತೆ, ಪಾಸ್ ಹೊಂದಿರುವ ವಿದ್ಯಾರ್ಥಿಗಳ ಜೊತೆ ಸೌಜನ್ಯದಿಂದ ವರ್ತಿಸುವಂತೆ ಚಾಲಕ ಹಾಗೂ ನಿರ್ವಾಹಕರಿಗೆ ನಿರ್ದೇಶನ ನೀಡುವಂತೆ ಸಾರಿಗೆ ಸಚಿವ ಲಕ್ಷ್ಮಣ ಸವದಿಯವರಿಗೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ.
ಈ ಕುರಿತು ಸಾರಿಗೆ ಸಚಿವರಿಗೆ ಪತ್ರ ಬರೆದಿರುವ ಸುರೇಶ್ ಕುಮಾರ್ ಅವರು, ಗ್ರಾಮಾಂತರ ಪ್ರದೇಶಗಳ ಅನೇಕ ಬಸ್ ನಿಲ್ದಾಣಗಳಲ್ಲಿ ಕೆಎಸ್ಆರ್'ಟಿಸಿಯ ಅನೇಕ ಬಸ್ ಗಳು ನಿಲ್ಲಿಸದೆ ವಿದ್ಯಾರ್ಥಿಗಳ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವುದು ಕಂಡು ಬರುತ್ತಿದೆ. ಅಲ್ಲದೆ, ಪಾಸ್ ಹೊಂದಿರುವ ವಿದ್ಯಾರ್ಥಿಗಳಿಗೆ ಚಾಲಕರು ಮತ್ತು ನಿರ್ವಾಹಕರು ಪದೇ ಪದೇ ಆಜ್ಞೆ ಮಾಡುವಂತೆ ಮಾತನಾಡುತ್ತಿರುವ ಬಗ್ಗೆ ದೂರುಗಳು ಕೇಳಿ ಬಂದಿವೆ.
ಈ ನಡೆ ಸರ್ಕಾರಕ್ಕೆ ಕೆಟ್ಟ ಹೆಸರು ತರುತ್ತದೆ. ಆದ್ದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗದ ರೀತಿ ಬಸ್ ಪ್ರಯಾಣಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ತಮ್ಮ ಇಲಾಖೆ ಅಧಿಕಾರಿಗಳಿಗೆ ತುರ್ತಾಗಿ ನಿರ್ದೇಶನ ನೀಡಬೇಕೆಂದು ಕೋರಿದ್ದಾರೆ.