ಸ್ಥಿತಿವಂತ, ಭೂಮಾಲಿಕರಲ್ಲಿಯೂ ಬಿಪಿಎಲ್ ಕಾರ್ಡ್: ರಾಜ್ಯದಲ್ಲಿ 91 ಸಾವಿರಕ್ಕೂ ಹೆಚ್ಚಿನ ಪಡಿತರ ಚೀಟಿ ರದ್ದು!

ಪಡಿತರ ಚೀಟಿ ಹೊಂದಿರುವವರ ಪೈಕಿ ಕನಿಷ್ಠ 91,189 ಜನರು  ಬಿಪಿಎಲ್ (ಬಡತನ ರೇಖೆಗಿಂತ ಕೆಳಗಿರುವ) ಸ್ತರಕ್ಕೆ ಸೇರಿದವರಲ್ಲ, ಆದರೆ ಸರ್ಕಾರದ ಸಬ್ಸಿಡಿಗಳನ್ನು ಬಳಸುತ್ತಿದ್ದಾರೆ. ಇಲಾಖೆ ಅಂತಹ ಪ್ರಕರಣಗಳನ್ನು ಗುರುತಿಸಿ ಅವರ ಪಡಿತರ ಚೀಟಿಗಳನ್ನು (ಆರ್‌ಸಿ) ರದ್ದುಗೊಳಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಇತ್ತೀಚಿನ ಮೌಲ್ಯಮಾಪನ ಕೆಲವು ಆಸಕ್ತಿದಾಯಕ ಡೇಟಾಗಳನ್ನು ಹೊರತಂದಿದೆ. ಪಡಿತರ ಚೀಟಿ ಹೊಂದಿರುವವರ ಪೈಕಿ ಕನಿಷ್ಠ 91,189 ಜನರು  ಬಿಪಿಎಲ್ (ಬಡತನ ರೇಖೆಗಿಂತ ಕೆಳಗಿರುವ) ಸ್ತರಕ್ಕೆ ಸೇರಿದವರಲ್ಲ, ಆದರೆ ಸರ್ಕಾರದ ಸಬ್ಸಿಡಿಗಳನ್ನು ಬಳಸುತ್ತಿದ್ದಾರೆ. ಇಲಾಖೆ ಅಂತಹ ಪ್ರಕರಣಗಳನ್ನು ಗುರುತಿಸಿ ಅವರ ಪಡಿತರ ಚೀಟಿಗಳನ್ನು (ಆರ್‌ಸಿ) ರದ್ದುಗೊಳಿಸಿದೆ.

ಸಬ್ಸಿಡಿ ಪಡಿತರವನ್ನು ಪಡೆಯುತ್ತಿರುವ ಅಂತಹ ಅನೇಕ ವ್ಯಕ್ತಿಗಳು ಮೂರು ಹೆಕ್ಟೇರ್ ಭೂಮಿಯನ್ನು ಹೊಂದಿದ್ದಾರೆ ಅಥವಾ ವಾರ್ಷಿಕ ಆದಾಯವು 1.28 ಲಕ್ಷ ರೂ. ಇದೆ.

ಪಡಿತರ ಚೀಟಿ ಹೊಂದಿರುವ ಕೆಲವರು ಮೃತರಾಗಿದ್ದಾರೆ ಇತರರು ರಾಜಕೀಯ ಸಂಪರ್ಕಗಳನ್ನು ಹೊಂದಿದ್ದಾರೆ ಅಥವಾ ಉತ್ತಮ ವೃತ್ತಿಯನ್ನು ಹೊಂದಿದ್ದಾರೆ, ಆದರೆ ಇನ್ನೂ ಬಿಪಿಎಲ್ ಕಾರ್ಡುಗಳನ್ನು ಹೊಂದಿದ್ದಾರೆ ಮತ್ತು ಮಾಸಿಕ ಸಬ್ಸಿಡಿ ಪಡಿತರವನ್ನು ಪಡೆಯುತ್ತಾರೆ

ಇಂತಹ ಹೆಚ್ಚಿನ ಪ್ರಕರಣಗಳನ್ನು ಇಲಾಖೆ ಪರಿಶೀಲಿಸುತ್ತಿದೆ. ಇತ್ತೀಚಿನ ವರದಿಯ ಪ್ರಕಾರ, ಅವರ ಆದಾಯ ತೆರಿಗೆ ವಿವರಗಳ ಆಧಾರದ ಮೇಲೆ ಒಟ್ಟು 91,189 ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ. 50,060 ಜನರು ಆಂತ್ಯೋದಯ ಅನ್ನ ಯೋಜನೆ (ಎಎವೈ), ಪ್ರಾಥಮಿಕ ನಿವಾಸಿ  (ಪಿಎಚ್‌ಹೆಚ್) ಕಾರ್ಡ್‌ಗಳನ್ನು ಹೊಂದಿದ್ದಾರೆ, 1.20 ಲಕ್ಷ ರೂ.ಗಿಂತ ಹೆಚ್ಚಿನ ಕೌಟುಂಬಿಕ ಆದಾಯ ಹೊಂದಿ 85,204 ಆದಾಯ ತೆರಿಗೆ ಪಾವತಿದಾರರು ಮತ್ತು 2,18,125 ಜನರು ಗ್ರಾಮೀಣ ಪ್ರದೇಶದಲ್ಲಿ ಮೂರು ಹೆಕ್ಟೇರ್‌ಗಿಂತ ಹೆಚ್ಚು ಭೂಮಿಯನ್ನು ಹೊಂದಿದ್ದಾರೆ ಎಂದು ತಿಳಿದುಬಂದಿದೆ.

ಆದಾಯ ತೆರಿಗೆ ಸಲ್ಲಿಕೆಯ ಆಧಾರದ ಮೇಲೆ ಒಟ್ಟು 79,069 ಎಎವೈ ಪಡಿತರ ಚೀಟಿಗಳು ಮತ್ತು ಪಿಎಚ್‌ಹೆಚ್ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ವಿಭಾಗದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಬಿ.ಎಚ್ ಅನಿಲ್ ಕುಮಾರ್ ಟಿಎನ್‌ಐಇಗೆ ತಿಳಿಸಿದ್ದಾರೆ. ಈ ಕಾರ್ಯಾಚರಣೆಯು  ಇಲಾಖೆಗೆ ತಿಂಗಳಿಗೆ 5.01 ಕೋಟಿ ರೂ., ಮತ್ತು ವಾರ್ಷಿಕವಾಗಿ 60.20 ಕೋಟಿ ರೂ ಉಳಿತಾಯಕ್ಕೆ ಕಾರಣವಾಗಿದೆ.

"ಆದಾಯ-ತೆರಿಗೆ ಸಲ್ಲಿಸುವ ಡೇಟಾವನ್ನು ಸಿಂಕ್ರೊನೈಸ್ ಮಾಡುವ ಮೂಲಕ, ಈ 79,069 ಪಡಿತರ ಚೀಟಿ ಹೊಂದಿರುವವರಲ್ಲಿ 4,893 ಮಂದಿ ಎಎವೈ ಕಾರ್ಡ್ ಹೊಂದಿರುವವರು ಮತ್ತು 74,176 ಪಿಎಚ್‌ಹೆಚ್ ಕಾರ್ಡ್  ಹೊಂದಿರುವವರು ಎಂದು ಇಲಾಖೆ ಗುರುತಿಸಿದೆ. ಅಲ್ಲದೆ, ಕಂದಾಯ ಇಲಾಖೆ ಹಂಚಿಕೊಂಡ ಆದಾಯ ಪ್ರಮಾಣಪತ್ರದ ಆಧಾರದ ಮೇಲೆ, 12,120 ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ, ಮತ್ತು ಸಾವಿನ ಮಾಹಿತಿಯ ನೋಂದಣಿಯ ಆಧಾರದ ಮೇಲೆ, ನಾವು 4,01,307 ಪಡಿತರ ಚೀಟಿ ಹೊಂದಿರುವವರನ್ನು ಗುರುತಿಸಲು ಸಾಧ್ಯವಾಯಿತು, ”ಎಂದು ಅವರು ಹೇಳಿದರು.

ಡೇಟಾ ಎಲಿಮಿನೇಷನ್ ಮಾನದಂಡಗಳು ಆಧಾರ್ ಕಾರ್ಡ್‌ಗಳ ಡೇಟಾವನ್ನು ಆಧರಿಸಿದೆ. ಅನರ್ಹ ಫಲಾನುಭವಿಗಳನ್ನು ಗುರುತಿಸಲು ಭೂಮಿ ಡೇಟಾ ಸಂಚಯದ ದಾಖಲೆಗಳನ್ನು ಸಹ ಪರಿಶೀಲಿಸಲಾಯಿತು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಡೇಟಾಬೇಸ್‌ನಲ್ಲಿ ಸೇರ್ಪಡೆ ದೋಷಗಳನ್ನು ತೆಗೆದುಹಾಕಲು ಆಹಾರ ಫಲಾನುಭವಿಗಳ ಡೇಟಾಬೇಸ್ ಅನ್ನು ಈಗ ಬೇರೆ ಬೇರೆ ಇಲಾಖೆಗಳ ಫಲಾನುಭವಿಗಳ ಪಟ್ಟಿಗಳೊಂದಿಗೆ ಹೋಲಿಕೆ ಮಾಡಲಾಗುತ್ತಿದೆ. ಕಳೆದ ಎರಡು ವರ್ಷಗಳಿಂದ ಇಲಾಖೆ ಯಾವುದೇ ಪಡಿತರ ಚೀಟಿ ನೀಡಿಲ್ಲ, ಮತ್ತು ಸಾಂಕ್ರಾಮಿಕ ರೋಗದ ಒಂದು ವರ್ಷಕ್ಕೂ ಹೆಚ್ಚು ಕಾಲಅಕ್ರಮ ಫಲಾನುಭವಿಗಳನ್ನು ತೆಗೆದು ಹಾಕಲು  ಬಳಸಿಕೊಳ್ಳಲಾಗಿದೆ. ಡೇಟಾವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳೊಂದಿಗೆ ಹಂಚಿಕೊಳ್ಳಲಾಗಿದೆ ಎಂದು ಕುಮಾರ್ ಹೇಳಿದರು.

ಕೇಂದ್ರವು ಈಗ ವಿವರವಾದ ವರದಿಯನ್ನು ಕೋರಿದೆ ಮತ್ತು ಸಬ್ಸಿಡಿಯನ್ನು ದುರುಪಯೋಗಪಡಿಸಿಕೊಳ್ಳುವ ಎಲ್ಲರನ್ನು ಕಂಡುಹಿಡಿಯಲು ಅದೇ ಮಾದರಿಯನ್ನು ಬಳಸಿಕೊಳ್ಲಲು ಇತರ ರಾಜ್ಯಗಳನ್ನು ಕೇಳಿದೆ.

  • ರಾಜ್ಯದಲ್ಲಿ ಒಟ್ಟು ಪಡಿತರ ಚೀಟಿ ಹೊಂದಿರುವವರ ಸಂಖ್ಯೆ 1,48,89,430
  • ಅನರ್ಹ ಪಡಿತರ ಚೀಟಿಗಳು 5,53,969
  • ಸ್ವೀಕರಿಸಲಾದ ಹೊಸ ಪಡಿತರ ಚೀಟಿ ಅರ್ಜಿ3,37,920
  • ಪರಿಶೀಲಿಸಲಾಗಿರುವ ಅರ್ಜಿ 1,86,092
  • ತಿರಸ್ಕರಿಸಲಾದ ಅರ್ಜಿ 57,423

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com