ಬೆಂಗಳೂರಿನಲ್ಲಿ ನಿಗೂಢ ಶಬ್ಧ, ಪೊಲೀಸರಿಗೆ ಇನ್ನೂ ಸಿಕ್ಕಿಲ್ಲ ಸುಳಿವು!

ಶುಕ್ರವಾರ ಮಧ್ಯಾಹ್ನ 12-18ರ ಸುಮಾರಿನಲ್ಲಿ ಬೆಂಗಳೂರಿನಾದ್ಯಂತ ಪ್ರತಿಧ್ವನಿಸಿದ ನಿಗೂಢ ಶಬ್ಧವೊಂದು ಜನರ ಭೀತಿಗೆ ಕಾರಣವಾಗಿದ್ದು, ಉಗ್ರರ ದಾಳಿಯೇ ಅಥವಾ ಕ್ವಾರಿಯಲ್ಲಿನ ಸ್ಫೋಟವೇ  ಎಂಬಂತಹ ನಾನಾ ಅನುಮಾನಗಳು ಉಂಟಾಗಿವೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಶುಕ್ರವಾರ ಮಧ್ಯಾಹ್ನ 12-18ರ ಸುಮಾರಿನಲ್ಲಿ ಬೆಂಗಳೂರಿನಾದ್ಯಂತ ಪ್ರತಿಧ್ವನಿಸಿದ ನಿಗೂಢ ಶಬ್ಧವೊಂದು ಜನರ ಭೀತಿಗೆ ಕಾರಣವಾಗಿದ್ದು, ಉಗ್ರರ ದಾಳಿಯೇ ಅಥವಾ ಕ್ವಾರಿಯಲ್ಲಿನ ಸ್ಫೋಟವೇ  ಎಂಬಂತಹ ನಾನಾ ಅನುಮಾನಗಳು ಉಂಟಾಗಿವೆ.

ಆರ್ ಟಿ ನಗರ, ಮಲ್ಲೇಶ್ವರಂ, ರಾಜಾಜಿನಗರ, ರಾಜರಾಜೇಶ್ವರಿನಗರ, ಜೆಪಿನಗರ, ಜಯನಗರ, ಬಿಟಿಎಂ ಲೇಔಟ್, ಎಲೆಕ್ಟ್ರಾನಿಕ್ ಸಿಟಿ, ಇಂದಿರಾನಗರ ಸೇರಿದಂತೆ ನಗರದ ದಕ್ಷಿಣ ಹಾಗೂ ಪೂರ್ವ ಭಾಗದ ಹಲವೆಡೆ ಈ ಶಬ್ಧ ಕೇಳಿಬಂದಿದೆ. ಈ ಶಬ್ಧದ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕಿಲ್ಲ, ಎಲ್ಲಿಂದ ಈ ಶಬ್ದ ಕೇಳಿಬಂತು ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನಗರದ ಪೊಲೀಸರು ಅಥವಾ ಕಂಟ್ರೋಲ್ ರೂಂ ಸಂಪರ್ಕಿಸಿದರೆ, ಅದರ ಸಣ್ಣ ಸುಳಿವು ಕೂಡಾ ಈವರೆಗೂ ಸಿಕ್ಕಿಲ್ಲ ಎನ್ನುತ್ತಾರೆ.

ಈ ಶಬ್ದ ಎಲ್ಲಿಂದ ಬಂತು ಎಂಬುದನ್ನು ಕಂಡುಹಿಡಿಯಲು ವಿವಿಧ ಭಾಗದ ಗಸ್ತು ಸಿಬ್ಬಂದಿಗೆ ನಗರದ ಪೊಲೀಸರು ನಿರ್ದೇಶಿಸಿದ್ದಾರೆ. ಆದರೆ, ಯಾವುದೇ ಮಾಹಿತಿಲ್ಲ ಸಿಕ್ಕಿಲ್ಲ, ಏಪ್ರಿಲ್ 17, 2013ರಲ್ಲಿ ನಗರದ ಬಿಜೆಪಿ ಕಚೇರಿ ಹತ್ತಿರ ಇದೇ ರೀತಿಯ ಸ್ಫೋಟ ಸಂಭವಿಸಿತ್ತು.

ಸೂನಿಕ್ ಬೂಮ್ ನಂತಹ ಶಬ್ದ ಕೂಡಾ ಬೆಂಗಳೂರಿಗೆ ಪರಿಚಿತ. ಯುದ್ಧ ವಿಮಾನಗಳು ವೇಗವನ್ನು ಹೆಚ್ಚಿಸಿದಾಗಲೂ ಇಂತಹ ಶಬ್ಧ ಕೇಳಿಬರುತ್ತದೆ. ಆದರೆ, ಇಂತಹ ಯಾವುದೇ ರೀತಿಯ ಘಟನೆಗಳು ನಡೆದಿಲ್ಲ ಎಂದು ರಕ್ಷಣಾ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಹೆಚ್ ಎಎಲ್ ಕೂಡಾ ಈ ಶಬ್ಧದ ಬಗ್ಗೆ ಏನನ್ನೂ ಪ್ರತಿಕ್ರಿಯಿಸಿಲ್ಲ.

ಯಾವುದೇ ಭೂಕಂಪನದಂತಹ ಘಟನೆಗಳು ಕೂಡಾ ಸಂಭವಿಸಿಲ್ಲ ಎಂದು ರಾಜ್ಯ ವಿಪತ್ತು ನಿರ್ವಹಣಾ ನಿರ್ವಹಣಾ ಮಂಡಳಿ ಹೇಳಿದೆ. ಈ ಮಧ್ಯೆ ನಗರದ ಹೊರವಲಯದಲ್ಲಿ ಕ್ವಾರಿಯಲ್ಲಿ ಏನಾದರೂ ಇಂತಹ ಶಬ್ಧ ಬಂದಿರುವ ಸಾಧ್ಯತೆ ಇದೆಯೇ ಎಂಬುದರ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಗಮನಹರಿಸಿದೆ.

ಸಾಮಾನ್ಯವಾಗಿ ಕ್ವಾರಿಗಳಲ್ಲಿ ಸಂಜೆ 5-30ರಿಂದ 6 ಗಂಟೆ ನಡುವೆ ಸ್ಫೋಟಗಳು ಆಗುತ್ತವೆ. ಆದರೆ, ಇದು ಮಧ್ಯಾಹ್ನಕೇಳಿಬಂದಿದೆ. ನಗರದೊಳಗೆ ಇಂತಹ ಯಾವುದೇ ಸ್ಫೋಟ ಸಂಭವಿಸಿಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಜಿ. ಪ್ರತಿಮಾ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com