ಬಂಟ್ವಾಳ: ಸಿಡಿಲು ಬಡಿದು ತಾಯಿ, ಇಬ್ಬರು ಮಕ್ಕಳಿಗೆ ಗಾಯ

ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ವೀರಕಂಭ ಗ್ರಾಮದ ಕಲ್ಮಲೆ ಎಂಬವರ ಮನೆಗೆ ಸಿಡಿಲು ಬಡಿದು ಮಹಿಳೆ ಮತ್ತು ಆಕೆಯ ಇಬ್ಬರು ಹೆಣ್ಣುಮಕ್ಕಳು ಗಾಯಗೊಂಡಿದ್ದಾರೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ವೀರಕಂಭ ಗ್ರಾಮದ ಕಲ್ಮಲೆ ಎಂಬವರ ಮನೆಗೆ ಸಿಡಿಲು ಬಡಿದು ಮಹಿಳೆ ಮತ್ತು ಆಕೆಯ ಇಬ್ಬರು ಹೆಣ್ಣುಮಕ್ಕಳು ಗಾಯಗೊಂಡಿದ್ದಾರೆ. 

ಬುಧವಾರ ರಾತ್ರಿ ಘಟನೆ ನಡೆದಿದ್ದು, ಸಿಡಿಲಿನ ಬಡಿತಕ್ಕೆ ಜಯಂತಿ ಮತ್ತು ರಘುನಾಥ್ ಶೆಟ್ಟಿಯವರ ಮನೆ ಭಾಗಶಃ ಹಾನಿಯಾಗಿದೆ ಮತ್ತು ಮನೆಯ ಎಲ್ಲಾ ವಿದ್ಯುತ್ ಉಪಕರಣಗಳು ಹಾನಿಗೊಂಡಿವೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಮನೆಯ ಗೋಡೆಗಳು ಸಹ ಬಿರುಕುಬಿಟ್ಟಿದ್ದು, ಮೇಲ್ಛಾವಣಿಯ ಅಂಚುಗಳು ಹಾನಿಗೊಳಗಾಗಿವೆ. ಗಾಯಗೊಂಡ ಜಯಂತಿ ಮತ್ತು ಅವರ ಪುತ್ರಿಯರಾದ ಪ್ರಜೀತಾ (19) ಮತ್ತು ರಕ್ಷಿತಾ (24) ಅವರನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com