ಯೋಗೇಶ್ ಗೌಡ ಹತ್ಯೆ: ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡ ಅರೆಸ್ಟ್

ಧಾರವಾಡ ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣ ಸಂಬಂಧ  ಮಾಜಿ ಸಚಿವ ವಿನಯ್ ಕುಲಕರ್ಣಿ ಮಾಜಿ ಆಪ್ತ ಕಾರ್ಯದರ್ಶಿ, ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಧಾರವಡ:  ಧಾರವಾಡ ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣ ಸಂಬಂಧ  ಮಾಜಿ ಸಚಿವ ವಿನಯ್ ಕುಲಕರ್ಣಿ ಮಾಜಿ ಆಪ್ತ ಕಾರ್ಯದರ್ಶಿ, ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

ಪ್ರಸ್ತುತ  ಗದಗ ಎಪಿಎಂಸಿ ಕಾರ್ಯದರ್ಶಿಯಾಗಿ ಕರ್ತವ್ಯ  ನಿರ್ವಹಿಸುತ್ತಿದ್ದ ಸೋಮು ನ್ಯಾಮಗೌಡ ಅವರನ್ನು ಗದಗಲ್ಲಿ ಸಿಬಿಐ ಅಧಿಕಾರಿಗಳು ಬಂಧಿಸಿ ಧಾರವಾಡ ಉಪನಗರ ಠಾಣೆಗೆ ಕರೆತಂದಿದ್ದಾರೆ.

ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ವಿನಯ್ ಕುಲಕರ್ಣಿ ಇದೀಗ ಬೆಳಗಾವಿ ಜೈಲಿನಲ್ಲಿ ಸೆರೆವಾಸ ಅನುಭವಿಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com