ಧಾರವಾಡ: ಬೀದಿ ನಾಯಿಗಳ ದಾಳಿಗೆ 8 ವರ್ಷದ ಬಾಲಕ ಬಲಿ

ಬೀದಿ ನಾಯಿಗಳು ದಾಳಿ ಮಾಡಿದ ಹಿನ್ನೆಲೆಯಲ್ಲಿ 8 ವರ್ಷದ ಬಾಲಕನೋರ್ವ ಮೃತಪಟ್ಟಿರುವ ಘಟನೆ ಧಾರವಾಡದ ಹೊರವಲಯದ ನವಲೂರ ಗ್ರಾಮದ ರೈಲು ನಿಲ್ದಾಣದ ಬಳಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಧಾರವಾಡ: ಬೀದಿ ನಾಯಿಗಳು ದಾಳಿ ಮಾಡಿದ ಹಿನ್ನೆಲೆಯಲ್ಲಿ 8 ವರ್ಷದ ಬಾಲಕನೋರ್ವ ಮೃತಪಟ್ಟಿರುವ ಘಟನೆ ಧಾರವಾಡದ ಹೊರವಲಯದ ನವಲೂರ ಗ್ರಾಮದ ರೈಲು ನಿಲ್ದಾಣದ ಬಳಿ ನಡೆದಿದೆ.

ಬಾಬುಲ್ ರಾಠೋಡ (8) ಸಾವನ್ನಪ್ಪಿದ ಬಾಲಕ. ರಾಯಚೂರು ಜಿಲ್ಲೆಯ ಲಿಂಗಸೂರು ಮೂಲದ ಗೋಪಾಲ್ ಹಾಗು ಚನ್ನಮ್ಮ ದಂಪತಿಯ ಪುತ್ರ ಬಾಬುಲ್ ರಾಠೋಡ ಕಟ್ಟಡ ಕಾಮಗಾರಿಗಾಗಿ ಪೋಷಕರ ಜೊತೆ ಧಾರವಾಡಕ್ಕೆ ಬಂದಿದ್ದ.

ಬಾಲಕನನ್ನು ಕೆಲಸದ ಜಾಗದಲ್ಲಿ ಬಿಟ್ಟು ಪೋಷಕರು ತಿಂಡಿ ತಿನ್ನಲು ಹೋಗಿದ್ದರು. ಈ ವೇಳೆ ನಾಯಿಗಳು ಬಾಲಕನ ಮೇಲೆರಗಿವೆ. ನಾಯಿಗಳ ದಾಳಿಯಿಂದ ಗಾಯಗೊಂಡ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. 

ಮೃತಪಟ್ಟ ಬಾಲಕನ ಪೋಷಕರು ರಾಯಚೂರು ಮೂಲದವರಾಗಿದ್ದು, ಕಟ್ಟಡ ನಿರ್ಮಾಣ ಕೆಲಸಕ್ಕಾಗಿ ಧಾರವಾಡಕ್ಕೆ ಬಂದಿದ್ದರು.

ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ನಾಯಿ ಕಡಿತದಿಂದಲೇ ಬಾಲಕ ಸಾವನ್ನಪ್ಪಿರುವುದನ್ನು ಪೊಲೀಸರು ದೃಢಪಡಿಸಿಲ್ಲ. ವೈದ್ಯಕೀಯ ವರದಿ ಬಂದ ಬಳಿಕ ಸತ್ಯಾಂಶ ತಿಳಿದುಬರಲಿದೆ ಎನ್ನಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com