ಕಲುಬುರಗಿ: ಕಲಬುರಗಿಯ ಎಂಬಿ ನಗರ ಠಾಣೆ ಪೊಲೀಸರ ವಶದಲ್ಲಿದ್ದ ವ್ಯಕ್ತಿಯೋರ್ವ ಮೃತಪಟ್ಟಿದ್ದು, ಈ ಸಂಬಂಧ ಹಲವು ಅನುಮಾನಗಳು ಮೂಡತೊಡಗಿವೆ.
ಹೈದರಾಬಾದ್ ಮೂಲದ ವೆಂಕಟ್ ಎಂಬುವವರ ಪುತ್ರ ಚಂದ್ರು (30) ಮೃತ ವ್ಯಕ್ತಿಯಾಗಿದ್ದಾರೆ. ಕಲಬುರಗಿಯ ಪೂಜಾ ಕಾಲೋನಿಯಲ್ಲಿ ವಾಸವಿದ್ದ ಚಂದ್ರುನನ್ನು ಹೈವೇನಲ್ಲಿ ಮೊಬೈಲ್ ರಾಬರಿ ಮಾಡುತ್ತಿದ್ದ ವೇಳೆ ದಾಳಿ ನಡೆಸಿ ಪೊಲೀಸರು ಬಂಧಿಸಿದ್ದರು.
ಈತನನ್ನು ವಿಚಾರಣೆಗೊಳಿಪಡಿಸಿದ ವೇಳೆ ಆರೋಗ್ಯ ಸಮಸ್ಯೆಗಳಿರುವುದಾಗಿ ಹೇಳಿದ್ದಾರೆ. ಕೂಡಲೇ ಪೊಲೀಸರು ಆತನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಆತ ಸಾವನ್ನಪ್ಪಿರುವುದು ತಿಳಿದುಬಂದಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಪೊಲೀಸ್ ಆಯುಕ್ತ ರವಿಕುಮಾರ್ ಅವರು, ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಎಸಿಪಿ ಗಿರೀಶ್ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ. ತನಿಖೆಯ ನಂತರ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ ಎಂದು ಹೇಳಿದ್ದಾರೆ.
Advertisement