ಕಳ್ಳತನ ಪ್ರಕರಣ: ಕಲಬುರಗಿ ಪೊಲೀಸರ ವಶದಲ್ಲಿದ್ದ ವ್ಯಕ್ತಿ ಸಾವು, ತನಿಖೆ ಆರಂಭ

ಕಲಬುರಗಿಯ ಎಂಬಿ ನಗರ ಠಾಣೆ ಪೊಲೀಸರ ವಶದಲ್ಲಿದ್ದ ವ್ಯಕ್ತಿಯೋರ್ವ ಮೃತಪಟ್ಟಿದ್ದು, ಈ ಸಂಬಂಧ ಹಲವು ಅನುಮಾನಗಳು ಮೂಡತೊಡಗಿವೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕಲುಬುರಗಿ: ಕಲಬುರಗಿಯ ಎಂಬಿ ನಗರ ಠಾಣೆ ಪೊಲೀಸರ ವಶದಲ್ಲಿದ್ದ ವ್ಯಕ್ತಿಯೋರ್ವ ಮೃತಪಟ್ಟಿದ್ದು, ಈ ಸಂಬಂಧ ಹಲವು ಅನುಮಾನಗಳು ಮೂಡತೊಡಗಿವೆ.

ಹೈದರಾಬಾದ್ ಮೂಲದ ವೆಂಕಟ್ ಎಂಬುವವರ ಪುತ್ರ ಚಂದ್ರು (30) ಮೃತ ವ್ಯಕ್ತಿಯಾಗಿದ್ದಾರೆ. ಕಲಬುರಗಿಯ ಪೂಜಾ ಕಾಲೋನಿಯಲ್ಲಿ ವಾಸವಿದ್ದ ಚಂದ್ರುನನ್ನು ಹೈವೇನಲ್ಲಿ ಮೊಬೈಲ್​ ರಾಬರಿ ಮಾಡುತ್ತಿದ್ದ ವೇಳೆ ದಾಳಿ ನಡೆಸಿ ಪೊಲೀಸರು ಬಂಧಿಸಿದ್ದರು. 

ಈತನನ್ನು ವಿಚಾರಣೆಗೊಳಿಪಡಿಸಿದ ವೇಳೆ ಆರೋಗ್ಯ ಸಮಸ್ಯೆಗಳಿರುವುದಾಗಿ ಹೇಳಿದ್ದಾರೆ. ಕೂಡಲೇ ಪೊಲೀಸರು ಆತನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಆತ ಸಾವನ್ನಪ್ಪಿರುವುದು ತಿಳಿದುಬಂದಿದೆ. 

ಈ ಕುರಿತು ಪ್ರತಿಕ್ರಿಯೆ ನೀಡಿರುವ ಪೊಲೀಸ್ ಆಯುಕ್ತ ರವಿಕುಮಾರ್ ಅವರು, ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಎಸಿಪಿ ಗಿರೀಶ್ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ. ತನಿಖೆಯ ನಂತರ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com