ಬೆಂಗಳೂರು: ಆಫ್'ಲೈನ್ ತರಗತಿಗಳ ಆರಂಭಿಸುವಂತೆ ಆಗ್ರಹಗಳು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಈ ಸಂಬಂಧ ಕಾರ್ಯಪಡೆ ವರದಿ ಬಂದ ಕೂಡಲೇ ಪರಿಶೀಲನೆ ನಡೆಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಗುರುವಾರ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಶಾಲೆ, ಪಿಯು ಕಾಲೇಜುಗಳನ್ನು ಯಾವಾಗಿನಿಂದ ಆರಂಭಿಸಬೇಕೆಂಬ ಬಗ್ಗೆ ಅನ್ಬುಕುಮಾರ್ ನೇತೃತ್ವದ ಕಾರ್ಯಪಡೆ ಸೋಮವಾರ ಇಲ್ಲವೆ ಮಂಗಳವಾರ ಸರ್ಕಾರಕ್ಕೆ ವರದಿ ನೀಡಲಿದೆ. ವರದಿ ಕೈ ಸೇರಿದ ಕೂಡಲೇ ಪರಿಶೀಲಿಸಿ ಆರೋಗ್ಯ ಇಲಾಖೆಯ ಅಭಿಪ್ರಾಯವನ್ನೂ ಪಡೆದು ಶಾಲಾರಂಭದ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಮೊದಲ ಹಂತದಲ್ಲಿ 9,10ನೇ ತರಗತಿ ಮತ್ತು ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿ ಮಕ್ಕಳಿಗೆ ಭೌತಿಕ ತರಗತಿ ಆರಂಭಿಸಲು ಚರ್ಚೆ ನಡೆಯುತ್ತಿದೆ. ಆದಷ್ಟು ಬೇಗ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
Advertisement