social_icon

ಮೂರಕ್ಕೂ ಹೆಚ್ಚು ಮಕ್ಕಳನ್ನು ಹೊಂದಿರುವ ಕುಟುಂಬದಿಂದ 'ಭಾಗ್ಯಲಕ್ಷ್ಮಿ' ಯೋಜನೆ ಸೌಲಭ್ಯ ಹಿಂಪಡೆಯಲು ಸರ್ಕಾರ ಮುಂದು!

ಮೂರಕ್ಕೂ ಹೆಚ್ಚು ಮಕ್ಕಳನ್ನು ಹೊಂದಿರುವ ಬಿಪಿಎಲ್ ಕುಟುಂಬಗಳಿಗೆ ನೀಡಿದ್ದ ಭಾಗ್ಯಲಕ್ಷ್ಮಿ ಯೋಜನೆ ಸೌಲಭ್ಯಗಳನ್ನು ಹಿಂಪಡೆಯಲು ಸರ್ಕಾರ ಮುಂದಾಗಿದೆ.

Published: 24th July 2021 02:18 PM  |   Last Updated: 24th July 2021 05:18 PM   |  A+A-


File image

ಸಂಗ್ರಹ ಚಿತ್ರ

Posted By : shilpa
Source : The New Indian Express

ಕೊಪ್ಪಳ:  ಮೂರಕ್ಕೂ ಹೆಚ್ಚು ಮಕ್ಕಳನ್ನು ಹೊಂದಿರುವ ಬಿಪಿಎಲ್ ಕುಟುಂಬಗಳಿಗೆ ನೀಡಿದ್ದ ಭಾಗ್ಯಲಕ್ಷ್ಮಿ ಯೋಜನೆ ಸೌಲಭ್ಯಗಳನ್ನು ಹಿಂಪಡೆಯಲು ಸರ್ಕಾರ ಮುಂದಾಗಿದೆ.

ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು ಮೂರು ಮತ್ತು ಅದಕ್ಕಿಂತ ಹೆಚ್ಚಿನ ಮಕ್ಕಳನ್ನು ಹೊಂದಿದ್ದು, ಸದ್ಯ ಇಕ್ಕಟ್ಟಿಗೆ ಸಿಲುಕಿದ್ದಾರೆ. ಬಿಪಿಎಲ್ ಕುಟುಂಬದಲ್ಲಿ ಜನಿಸಿದ ಹೆಣ್ಣು ಮಗುವಿಗೆ 18 ವರ್ಷ ತುಂಬಿದ ನಂತರ ಭಾಗ್ಯಲಕ್ಷ್ಮಿ ಯೋಜನೆಯಲ್ಲಿ 1 ಲಕ್ಷ ರು ಹಣ ನೀಡಲಾಗುತ್ತದೆ. 2005-06ನೇ ಸಾಲಿನಲ್ಲಿ ಸರ್ಕಾರ ಈ ಯೋಜನೆ ಜಾರಿಗೆ ತಂದಿತ್ತು.

ಆದರೆ, ಪ್ರಸ್ತುತ ಮೂರು ಮಕ್ಕಳನ್ನು ಹೊಂದಿರುವ ಬಿಪಿಎಲ್ ಕುಟುಂಬಗಳಿಂದ 2006 ಮತ್ತು 2014 ರ ನಡುವೆ ನೀಡಲಾದ ಭಾಗ್ಯಲಕ್ಷ್ಮಿ ಬಾಂಡ್‌ಗಳನ್ನು ಹಿಂಪಡೆಯಲು ಸರ್ಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಮನೆ-ಮನೆ ಸಮೀಕ್ಷೆಯನ್ನು ಪ್ರಾರಂಭಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

2005-06ರಲ್ಲಿ ಹೊರಡಿಸಲಾದ ಭಾಗ್ಯಲಕ್ಷ್ಮಿ ಬಾಂಡ್‌ಗಳು 2023-24ರಲ್ಲಿ ಮೆಚ್ಯುರಿಟಿ ಹೊಂದಲಿವೆ, ಆದರೆ ಅನೇಕ ಫಲಾನುಭವಿ ಬಿಪಿಎಲ್ ಕುಟುಂಬಗಳು ಈಗ ಮೂರು ಮಕ್ಕಳನ್ನು ಹೊಂದಿವೆ.

ಬಾಂಡ್‌ಗಳನ್ನು ವಾಪಸ್ ತೆಗೆದುಕೊಳ್ಳಲು ತೆರಳುವ ಅಂಗನವಾಡಿ ಕಾರ್ಯಕರ್ತೆಯರು ಫಲಾನುಭವಿಗಳಿಂದ ಪ್ರತಿರೋಧವನ್ನು ಎದುರಿಸುತ್ತಿದೆ, ವಿಶೇಷವಾಗಿ ಕೊಪ್ಪಳ ಜಿಲ್ಲೆಯ ಕುಕನೂರ್ ತಾಲ್ಲೂಕಿನಲ್ಲಿ ತೀವ್ರ ವಿರೋಧ ಎದುರಾಗಿದೆ.  ಇಂತಹ 50,000 ಕ್ಕೂ ಹೆಚ್ಚು ಕುಟುಂಬಗಳು ರಾಜ್ಯಾದ್ಯಂತ ಇವೆ, ಆದರೆ ಕೇವಲ ಕೊಪ್ಪಳ ಜಿಲ್ಲೆಯನ್ನು ಟಾರ್ಗೆಟ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮೂರು ಅಥವಾ ಹೆಚ್ಚಿನ ಮಕ್ಕಳೊಂದಿಗೆ ಬಿಪಿಎಲ್ ಕುಟುಂಬಗಳಿಗೆ ನೀಡಲಾದ ಬಾಂಡ್‌ಗಳನ್ನು ಹಿಂಪಡೆಯುವ ಕ್ರಮವನ್ನು ಸರ್ಕಾರ ಪ್ರಾರಂಭಿಸಿದೆ ಎಂದು ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭಾಗ್ಯಲಕ್ಷ್ಮಿ ಬಾಂಡ್‌ಗಳನ್ನು ನೀಡಿದಾಗ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಬಾರದು ಎಂದು ಬಿಪಿಎಲ್ ಕುಟುಂಬಗಳಿಗೆ ಮಾಹಿತಿ ನೀಡಲಾಗಿತ್ತು ಎಂದು ಇಲಾಖೆಯ ಉಪನಿರ್ದೇಶಕ ಅಕ್ಕಮಹಾದೇವಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು. 

ಬಡತನ ರೇಖೆಗಿಂತ ಕೆಳಗಿರುವ ಕುಟುಂಬವು ಇಬ್ಬರು ಮಕ್ಕಳನ್ನು ಹೊಂದಿದರೆ ಮಾತ್ರ ಯೋಜನೆಯ ಪ್ರಯೋಜನವನ್ನು ಖಚಿತಪಡಿಸಿಕೊಳ್ಳಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಏತನ್ಮಧ್ಯೆ ಸರ್ಕಾರ ತನ್ನ ಈ ಆದೇಶವನ್ನು ಹಿಂಪಡೆಯಬೇಕು ಎಂದು ಬಿಪಿಎಲ್ ಕುಟುಂಬಗಳು ಒತ್ತಾಯಿಸಿವೆ.


Stay up to date on all the latest ರಾಜ್ಯ news
Poll
Khalistani militant Hardeep Singh Nijjar

ಸಿಖ್ ಪ್ರತ್ಯೇಕತಾವಾದಿ ನಿಜ್ಜರ್ ಹತ್ಯೆಯಲ್ಲಿ ಭಾರತದ ಪಾತ್ರವಿದೆ ಎಂಬ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಆರೋಪವನ್ನು ನೀವು ನಂಬುತ್ತೀರಾ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp