ವರಿಷ್ಠರಿಂದ ಸಂದೇಶ ಬಂದಿಲ್ಲ, ರಾತ್ರಿ ಅಥವಾ ನಾಳೆ ಬರಬಹುದು: ಬಿಎಸ್ ಯಡಿಯೂರಪ್ಪ

ಹೈಕಮಾಂಡ್ ನಿಂದ ಇದುವರೆಗೂ ಯಾವುದೇ ಸಂದೇಶ ಬಂದಿಲ್ಲ. ರಾತ್ರಿ ಅಥವಾ ನಾಳೆ ಸಂದೇಶ ಬರಲಿದ್ದು, ಯಾವ ಸೂಚನೆ ನೀಡುತ್ತಾರೋ ಅದನ್ನು ಪಾಲಿಸುತ್ತೇನೆ. ಕೊನೆ ಕ್ಷಣದವರೆಗೂ ನಾನು ಕೆಲಸ ಮಾಡಿಕೊಂಡಿರುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ

ಬೆಂಗಳೂರು: ಹೈಕಮಾಂಡ್ ನಿಂದ ಇದುವರೆಗೂ ಯಾವುದೇ ಸಂದೇಶ ಬಂದಿಲ್ಲ. ರಾತ್ರಿ ಅಥವಾ ನಾಳೆ ಸಂದೇಶ ಬರಲಿದ್ದು, ಯಾವ ಸೂಚನೆ ನೀಡುತ್ತಾರೋ ಅದನ್ನು ಪಾಲಿಸುತ್ತೇನೆ. ಕೊನೆ ಕ್ಷಣದವರೆಗೂ ನಾನು ಕೆಲಸ ಮಾಡಿಕೊಂಡಿರುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಬೆಳಗಾವಿ ಪ್ರವಾಸದಿಂದ ಅಧಿಕೃತ ನಿವಾಸ ಕಾವೇರಿಗೆ ಮರಳಿದ ಮುಖ್ಯಮಂತ್ರಿಗಳು, ಇದುವರೆಗೂ ಹೈಕಮಾಂಡ್ ನಿಂದ ಸಂದೇಶ ಬಂದಿಲ್. ನಾಳೆ ಸಾಧನಾ ಸಮಾವೇಶದಲ್ಲಿ ನಮ್ಮ ಸರ್ಕಾರದ ಸಾಧನೆ ಬಗ್ಗೆ ಮಾತನಾಡಲಿದ್ದೇನೆ. ಕಾರವಾರ ಪ್ರವಾಸದ ಬಗ್ಗೆಯೂ ನಾಳೆ ತೀರ್ಮಾನ ಮಾಡಲಿದ್ದೇನೆ ಎಂದರು.

ಕೊನೆ ನಿಮಿಷದವರೆಗೂ ಕೆಲಸ ಮಾಡಲು ತೀರ್ಮಾನ ಮಾಡಿದ್ದೇನೆ. ಯಾವಾಗ ರಾಜೀನಾಮೆ ಕೇಳುತ್ತಾರೋ ಆಗ ಕೊಡಲು ಸಿದ್ದನಿದ್ದೇನೆ. ಇದುವರೆಗೂ ಸಂದೇಶ ಬಂದಿಲ್ಲ. ಬಂದ ತಕ್ಷಣ ಮುಂದುವರೆಯಿರಿ ಅಂದರೆ ಮುಂದುವರೆಯುತ್ತೇನೆ ಇಲ್ಲ, ಪಕ್ಷದಲ್ಲಿ ಕೆಲಸ ಮಾಡಿಕೊಂಡಿರುತ್ತೇನೆ. ಇಂದು ರಾತ್ರಿ ಅಥವಾ ನಾಳೆ ಗೊತ್ತಾಗಲಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com