ಮಠಾಧೀಶರುಗಳ ಶಕ್ತಿ ಪ್ರದರ್ಶನ: ಬೆಂಗಳೂರಿನ ಅರಮನೆ ಮೈದಾನದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪರ ಸಮಾವೇಶ 

ಮುಖ್ಯಮಂತ್ರಿ ಸ್ಥಾನಕ್ಕೆ ಬಿ ಎಸ್ ಯಡಿಯೂರಪ್ಪನವರು ರಾಜೀನಾಮೆ ನೀಡಬಾರದೆಂಬ ಒತ್ತಡ ಮಠಾಧೀಶರುಗಳಿಂದ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಭಾನುವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾವೇಶ ನಡೆದಿದ್ದು ಹಲವು ಮಠಾಧೀಶರುಗಳು ಭಾಗಿಯಾಗಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.
ಅರಮನೆ ಮೈದಾನದಲ್ಲಿ ನಡೆದ ಸಮಾವೇಶ
ಅರಮನೆ ಮೈದಾನದಲ್ಲಿ ನಡೆದ ಸಮಾವೇಶ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಬಿ ಎಸ್ ಯಡಿಯೂರಪ್ಪನವರು ರಾಜೀನಾಮೆ ನೀಡಬಾರದೆಂಬ ಒತ್ತಡ ಮಠಾಧೀಶರುಗಳಿಂದ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಭಾನುವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾವೇಶ ನಡೆದಿದ್ದು ಹಲವು ಮಠಾಧೀಶರುಗಳು ಭಾಗಿಯಾಗಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಬಾಳೆಹೊಸೂರು ದಿಂಗಾಲೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಈ ಸಮಾವೇಶ ನಡೆದಿದ್ದು, 500ಕ್ಕೂ ಅಧಿಕ ಮಠಾಧೀಶರು ಸಮಾವೇಶಕ್ಕೆ ಆಗಮಿಸಿದ್ದಾರೆ. ವರ್ತಮಾನದ ಸಮಸ್ಯೆಗಳು ಮತ್ತು ಪರಿಹಾರ ಎಂಬ ಹೆಸರಿನಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಸಿಎಂ ಸ್ಥಾನಕ್ಕೆ ಬಿಎಸ್‌ವೈ ರಾಜೀನಾಮೆ ನೀಡಬಾರದು ಎಂದು ಮಠಾಧೀಶರು ಸಮಾವೇಶದ ಮೂಲಕ ಬಿಜೆಪಿ ಹೈಕಮಾಂಡ್ ಗೆ ಒತ್ತಡ ಹೇರಲು ಮುಂದಾಗಿದ್ದಾರೆ. ಈ ಹಿಂದೆ ಬಿಎಸ್ ವೈ ನಿವಾಸಕ್ಕೆ ಮಠಾಧೀಶರು ತೆರಳಿ ತಮ್ಮ ಬೆಂಬಲ ಸೂಚಿಸಿ ಸುದ್ದಿಯಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com