ಶಿವಮೊಗ್ಗದಲ್ಲಿ ಇಳಿದ ಕೊರೋನಾ ಅಬ್ಬರ: ಸತತ 2ನೇ ದಿನ ಸಾವಿನ ಸಂಖ್ಯೆ ಶೂನ್ಯ!

ಶಿವಮೊಗ್ಗದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗಿದ್ದು, ಸತತ 2ನೇ ದಿನವೂ ಜಿಲ್ಲೆಯಲ್ಲಿ ಕೊರೋನಾ ಸಾವಿನ ಸಂಖ್ಯೆ ಶೂನ್ಯವಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶಿವಮೊಗ್ಗ: ಶಿವಮೊಗ್ಗದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗಿದ್ದು, ಸತತ 2ನೇ ದಿನವೂ ಜಿಲ್ಲೆಯಲ್ಲಿ ಕೊರೋನಾ ಸಾವಿನ ಸಂಖ್ಯೆ ಶೂನ್ಯವಾಗಿದೆ. 

9 ವಾರಗಳ ಅಂತರದ ಬಳಿಕ ಜಿಲ್ಲೆಯಲ್ಲಿ ಜುಲೈ 26 ರಿಂದ ಯಾವುದೇ ಕೋವಿಡ್ -19 ಸಾವು ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸೋಂಕು ಕಾಣಿಸಿಕೊಂಡ 24 ಗಂಟೆಗಳೊಳಗಾಗಿ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸುತ್ತಿರುವುದರಿಂದ ಸಾವಿನ ಸಂಖ್ಯೆ ಇಳಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಅವರು ಹೇಳಿದ್ದಾರೆ. 

ಸೋಂಕಿತ ವ್ಯಕ್ತಿಗೆ ಶೀಘ್ರಗತಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜುಲೈ 27ರವರೆಗೆ ಜಿಲ್ಲೆಯಲ್ಲಿ ಒಟ್ಟು 1,039 ಸಾವುಗಳು ಸಂಭವಿಸಿದ್ದು, ಶೇ.50ರಷ್ಟು ಸಾವುಗಳು ಚಿಕ್ಕಮಗಳೂರು, ದಾವಣಗೆರೆಯ ಚೆನ್ನಗಿರಿ ಹಾಗೂ ಕಾರವಾರದಲ್ಲಿ ಸಂಭವಿಸಿದೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com