ಬೆಂಗಳೂರು: ಸರಿಯಾಗಿ ಮಾಸ್ಕ್ ಧರಿಸದ ಯುವತಿ ಮೇಲೆ ಹಲ್ಲೆ

ಮಾಸ್ಕ್ ಸರಿಯಾಗಿ ಧರಿಸದ ಯುವತಿ ಮೇಲೆ ಮತ್ತೊಬ್ಬ ಯುವತಿ ಹಲ್ಲೆ ನಡೆಸಿರುವ ಘಟನೆ ಬೆಳಿಗ್ಗೆ ಸದಾಶಿವನಗರದಲ್ಲಿ ನಡೆದಿದೆ.
ಹಲ್ಲೆ ನಡೆಸಿದ ಹಾಗೂ ದೂರು ಕೊಟ್ಟ ಮಹಿಳೆಯರು
ಹಲ್ಲೆ ನಡೆಸಿದ ಹಾಗೂ ದೂರು ಕೊಟ್ಟ ಮಹಿಳೆಯರು

ಬೆಂಗಳೂರು: ಮಾಸ್ಕ್ ಸರಿಯಾಗಿ ಧರಿಸದ ಯುವತಿ ಮೇಲೆ ಮತ್ತೊಬ್ಬ ಯುವತಿ ಹಲ್ಲೆ ನಡೆಸಿರುವ ಘಟನೆ ಬೆಳಿಗ್ಗೆ ಸದಾಶಿವನಗರದಲ್ಲಿ ನಡೆದಿದೆ.

ಮೂಗಿನ ಕೆಳಗೆ ಮಾಸ್ಕ್ ಹಾಕಲಾಗಿದೆ ಎಂಬ ಕಾರಣಕ್ಕೆ ಅದ್ವೈತ ಅರುಣ್ ಕುಮಾರ್ ಎಂಬ ಯುವತಿ ಮತ್ತೊಬ್ಬ ಯುವತಿಯ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾಳೆ.

ಯುವತಿ ಎರಡು ನಾಯಿಯೊಂದಿಗೆ ವಾಕಿಂಗ್ ಮಾಡುತ್ತಿದ್ದಾಗ ಎದುರಿನಿಂದ ಮತ್ತೋರ್ವ ಯುವತಿ ಬರುತ್ತಿದ್ದರು. ಮೂಗಿನ ಕೆಳಗೆ ಮಾಸ್ಕ್ ಯುವತಿ ಹಾಕಿದ ಹಿನ್ನೆಲೆಯಲ್ಲಿ ಏಕಾಏಕಿ ಯುವತಿ ದೊಣ್ಣೆಯಿಂದ ಹಲ್ಲೆ ಮಾಡಿದ್ದಾಳೆ. ಮಾಸ್ಕ್ ಸರಿಯಾಗಿ ಹಾಕದಿದ್ದರೆ ಕೇಳಲು ಪೊಲೀಸರಿದ್ದಾರೆ. ನನ್ನನ್ನು ಹೊಡೆಯುವುದಕ್ಕೆ ನೀವು ಯಾರು ಎಂದು ಹಲ್ಲೆಗೊಳಗಾದ ಯುವತಿ ಆಕ್ರೋಶ ಹೊರಹಾಕಿದ್ದಾರೆ.

ಇದನ್ನು ಪ್ರಶ್ನಿಸಲು ಮುಂದಾದ ಸಾರ್ವಜನಿಕರ ಮೇಲೂ ಹಲ್ಲೆ ಮಾಡಿದ ಯುವತಿ ಆಕ್ರೋಶ ವ್ಯಕ್ತಪಡಿಸಿದ್ದಾಳೆ ಎಂದು ಆರೋಪಿಸಲಾಗಿದೆ.

ದೊಣ್ಣೆಯಿಂದ ಹೊಡೆದಿದ್ದರಿಂದ ಸಿಟ್ಟಿಗೆದ್ದ ಮಹಿಳೆ ಸದಾಶಿವ ನಗರದ ಪೊಲೀಸ್ ಠಾಣೆಗೆ ದೂರವಾಣಿ ಕರೆ ಮಾಡಿ ದೂರು ನೀಡಿದ್ದರು. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ, ಎರಡು ನಾಯಿ ಸಮೇತ ಹಲ್ಲೆ ಮಾಡಿದ ಯುವತಿಯನ್ನು ಹೊಯ್ಸಳ ವಾಹನದಲ್ಲಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ಅಲ್ಲದೇ, ಹಲ್ಲೆ ಮಾಡಿದ ಯುವತಿ ತಾನು ಐಪಿಎಸ್​ ಅಧಿಕಾರಿ ಎಂದು ಹೇಳುತ್ತಿದ್ದು, ಈ ಕುರಿತು ಸೂಕ್ತ ತನಿಖೆ ಮಾಡುವಂತೆ ಸ್ಥಳದಲ್ಲಿದ್ದ ಹಿರಿಯ ನಾಗರಿಕರೊಬ್ಬರು ಆಗ್ರಹಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com