ಅಗತ್ಯವಿರುವವರಿಗೆ ಆಹಾರ ಪೂರೈಸಲು ಸ್ವಂತ ವಾಹನ ಬಳಸುವಂತಿಲ್ಲ: ಬೆಂಗಳೂರು ಪೊಲೀಸರ ಎಚ್ಚರಿಕೆ

ಅಗತ್ಯವಿರುವವರಿಗೆ ಆಹಾರ ಪ್ಯಾಕೆಟ್‌ಗಳನ್ನು ವಿತರಿಸುವ ನೆಪದಲ್ಲಿ ಜನರು ತಮ್ಮ ಸ್ವಂತ ವಾಹನಗಳನ್ನು ಹೊರಗೆ ತರಬಾರದು ಅವರು ಸರಕು ವಾಹನಗಳನ್ನು ಬಳಸಬೇಕು ಅಥವಾ ವಿತರಣಾ ಕಂಪನಿಗಳ ಮೂಲಕ ಹಂಚಬೇಕು ಎಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಅಗತ್ಯವಿರುವವರಿಗೆ ಆಹಾರ ಪ್ಯಾಕೆಟ್‌ಗಳನ್ನು ವಿತರಿಸುವ ನೆಪದಲ್ಲಿ ಜನರು ತಮ್ಮ ಸ್ವಂತ ವಾಹನಗಳನ್ನು ಹೊರಗೆ ತರಬಾರದು ಅವರು ಸರಕು ವಾಹನಗಳನ್ನು ಬಳಸಬೇಕು ಅಥವಾ ವಿತರಣಾ ಕಂಪನಿಗಳ ಮೂಲಕ ಹಂಚಬೇಕು ಎಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ.

ತಮ್ಮ ವಾಹನಗಳನ್ನು ಹೊರಗೆ ತರಲು ಈ ನೆಪ ಬಳಸುತ್ತಿದ್ದಾರೆ, ಆದರೆ ಇದನ್ನು ಕ್ಷಮಿಸಲಾಗದು ಎಂದು ಪೊಲೀಸರು ಸ್ಪಷ್ಟ ಪಡಿಸಿದ್ದಾರೆ, ಕಾರು ಮತ್ತು ದ್ವಿಚಕ್ರ ವಾಹನಗಳಲ್ಲಿ ಆಹಾರ ಸಾಗಿಸುತ್ತಿದ್ದ ಹಲವು ಮಂದಿಯ ವಾಹನಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ.

ಬೊಮ್ಮನಹಳ್ಳಿ ಸಿಗ್ನಲ್ ಬಳಿ ಬಿಎಂಡಬ್ಲ್ಯು ಕಾರನ್ನು ವಶಪಡಿಸಿಕೊಳ್ಳಲಾಗಿದೆ. ತಾನು ಅಗತ್ಯವಿರುವವರಿಗೆ ಆಹಾರವನ್ನು ವಿತರಿಸುತ್ತಿದ್ದೇನೆ ಎಂದು ಚಾಲಕ ಹೇಳಿಕೊಂಡಿದ್ದಾನೆ ಮತ್ತು ಕಾರಿನಲ್ಲಿ ಸುಮಾರು 10 ಆಹಾರ ಪ್ಯಾಕೆಟ್‌ಗಳು ಪತ್ತೆಯಾಗಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಡವರಿಗೆ ಮತ್ತು ನಿರ್ಗತಿಕರಿಗೆ ಆಹಾರ ಪ್ಯಾಕೆಟ್‌ಗಳನ್ನು ವಿತರಿಸಲು ಬಯಸುವ ಯಾರಾದರೂ ಸರಕು ವಾಹನಗಳನ್ನು ಬಳಸುವ ಮೂಲಕ ಇದನ್ನು ಮಾಡಬಹುದು ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಅನೇಕ ಸಂಸ್ಥೆಗಳು ಈಗಾಗಲೇ ಈ ಸೇವೆಯನ್ನು ನೀಡುತ್ತಿವೆ. ಇದಕ್ಕಾಗಿ ಅವರು ವಿತರಣಾ ಕಂಪನಿಗಳನ್ನು ಸಹ ಬಳಸಬಹುದು. ಆದರೆ ಅವರು ಕಾರುಗಳಲ್ಲಿ ಅಥವಾ ಬೈಕ್‌ಗಳಲ್ಲಿ ವಿತರಿಸಲು ಸಾಧ್ಯವಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com