social_icon

ಕುಂದಾಪುರ: ಗ್ರಾಮ ಪಂಚಾಯಿತಿ ಅಧ್ಯಕ್ಷರ ಕಾರು ಡಿಕ್ಕಿಯಾಗಿ ವ್ಯಕ್ತಿ ಸಾವು, ದ್ವೇಷದ ಹಿನ್ನೆಲೆ ಕೊಲೆ -ಆರೋಪ

ಜೂನ್ 5 ರ ಶನಿವಾರ ತಡರಾತ್ರಿ ಕಾರು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದು ಈ ಕಾರನ್ನು ಯಡಮೊಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳ ಚಾಲನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಇದು ಶಂಕಿತ 'ಕೊಲೆ' ಪ್ರಕರಣವಾಗಿರಬಹುದು ಎಂದು ಹೇಳಲಾಗಿದೆ.

Published: 06th June 2021 10:28 AM  |   Last Updated: 06th June 2021 10:28 AM   |  A+A-


ಘಟನೆಗೆ ಕಾರಣವಾದ ಕಾರು

Online Desk

ಕುಂದಾಪುರ: ಜೂನ್ 5 ರ ಶನಿವಾರ ತಡರಾತ್ರಿ ಕಾರು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದು ಈ ಕಾರನ್ನು ಯಡಮೊಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳ ಚಾಲನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಇದು ಶಂಕಿತ 'ಕೊಲೆ' ಪ್ರಕರಣವಾಗಿರಬಹುದು ಎಂದು ಹೇಳಲಾಗಿದೆ.

ಮೃತ ವ್ಯಕ್ತಿಯನ್ನು ಯಡಮೊಗೆ ಮೂಲದ ಉದಯ್ ಗಾಣಿಗ (45) ಎಂದು ಗುರುತಿಸಲಾಗಿದೆ.

ರಾತ್ರಿ 8 ಗಂಟೆ ಸುಮಾರಿಗೆ ಉದಯ್ ಅವರ ನಿವಾಸದ ಮುಂದೆ ಈ ಘಟನೆ ನಡೆದಿದೆ.

ಜೂನ್ 5 ರ ಶನಿವಾರ ಸಂಜೆ ಉದಯ್ ರಸ್ತೆಯಲ್ಲಿ ನಿಂತಿದ್ದಾಗ ಪ್ರಾಣೇಶ್ ಯಡಿಯಾಳ ಅವರ ಕಾರು ಅವರನ್ನು ಡಿಕ್ಕಿಯಾಗಿದೆ ಎಂದು ಆರೋಪಿಸಲಾಗಿದೆ. ಅಪಘಾತಕ್ಕೆ ಕಾರಣವಾದ ನಂತರ, ಪಂಚಾಯತ್ ಅಧ್ಯಕ್ಷರು ಸ್ಥಳದಿಂದ ಪರಾರಿಯಾಗಿದ್ದು, ತಮ್ಮ ಕಾರನ್ನು ಸ್ಥಳದಲ್ಲೇ ಬಿಟ್ಟು ಹೋಗಿದ್ದಾರೆ.

ಜನರು 108 ಆಂಬ್ಯುಲೆನ್ಸ್ ಗೆ ಕರೆಮಾಡಿ ಉದಯ್ ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಅವರು ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದರು.

ಉದಯ್ ಹಾಗೂ ಪ್ರಾಣೇಶ್ ಅವರ ನಡುವೆ ಕೊಳವೆ ಬಾವಿ ಪರವಾನಿಗಿ ವಿಚಾರವಾಗಿ ದ್ವೇಷವಿತ್ತೆಂದು ಹೇಳಲಾಗಿದ್ದು  ಉದಯ್ ಕೊರೋನಾವೈರಸ್ ಸೋಂಕಿತ ಕುಟುಂಬಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ನಿಭಾಯಿಸಲು ಮತ್ತು ಸದ್ಯಕ್ಕೆ ಪ್ರಚಾರಪ್ರಿಯತೆಯನ್ನು ಬದಿಗಿರಿಸಬೇಕೆಂದು  ಅವರು ಅಧಿಕಾರದ ಸ್ಥಾನದಲ್ಲಿರುವವರನ್ನು ಒತ್ತಾಯಿಸಿದ್ದರು. ಸರ್ಕಾರದಿಂದ ಪಡೆದ ಹಣವನ್ನು ದುರುಪಯೋಗಪಡಿಸಿಕೊಳ್ಳದಂತೆ ಅವರು ಕೇಳಿದ್ದರು

ಉದಯ್ ಕೊಲೆ ಮಾಡಿದ ಕೃತ್ಯದಲ್ಲಿ ಪ್ರಾಣೇಶ್ ಅವರ ಮೇಲೆ ಆರೋಪವಿದೆ.

ಪ್ರಾಣೇಶ್ ಹಾಗೂ ಉದಯ್ ನಡುವಿನ ಘರ್ಷಣೆಯಿಂದ ಉದ್ಭವಿಸಿದ ಪ್ರಕರಣ ಇದು ಎಂದು ಇಲ್ಲಿನ ಉಪ ಪೊಲೀಸ್ ವರಿಷ್ಠಾಧಿಕಾರಿ ಕೆ ಶ್ರೀಕಾಂತ್ ಹೇಳಿದ್ದಾರೆ. ಸ್ಥಳ ತಪಾಸಣೆಯ ಸಮಯದಲ್ಲಿ, ಇದು ಅಪಘಾತವಲ್ಲ ಆದರೆ ಯೋಜಿತ ಕೊಲೆ ಎಂದು ಕಂಡುಬಂದಿದೆ,  ಸಧ್ಯ ಆರೋಪಿ ಪ್ರಾಣೇಶ್ ಯಡಿಯಾಳ ಅವರನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ. ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗುವುದು ಎಂದು ಹೇಳಿದರು. ಉದಯ್ ಅವರ ಕುಟುಂಬ ಕೂಡ ಇದು ಕೊಲೆ ಪ್ರಕರಣ ಎಂದು ಶಂಕಿಸಿದ್ದಾರೆ ಮತ್ತು ಅವರ ದೂರಿನ ಆಧಾರದ ಮೇಲೆ ತನಿಖೆ ನಡೆಸಲಾಗುವುದು ಎಂದು ಪೋಲೀಸ್ ಅಧಿಕಾರಿ ಹೇಳಿದ್ದಾರೆ.


Stay up to date on all the latest ರಾಜ್ಯ news
Poll
rahul-gandhi

ಮಾನಹಾನಿ ಪ್ರಕರಣದಲ್ಲಿ ಜೈಲು ಶಿಕ್ಷೆ; ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ: ಇದರಿಂದ...


Result
ಕಾಂಗ್ರೆಸ್ ಗೆ ಹಿನ್ನಡೆ
ಕಾಂಗ್ರೆಸ್ ಗೆ ಪ್ರಯೋಜನ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp