ಕೋವಿಡ್-19 ಎರಡನೇ ಅಲೆ ಅವಧಿಯಲ್ಲಿ ರಾಜ್ಯದಲ್ಲಿ 9 ವೈದ್ಯರು ಸಾವು: ಡಾ. ಕೆ.ಸುಧಾಕರ್

 ಕೋವಿಡ್-19 ಎರಡನೇ ಅಲೆ ಅವಧಿಯಲ್ಲಿ ರಾಜ್ಯದಲ್ಲಿ ಮೃತಪಟ್ಟ ವೈದ್ಯರ ಸಂಖ್ಯೆ ಕಡಿಮೆ ಪ್ರಮಾಣದಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ಡಾ. ಕೆ. ಸುಧಾಕರ್
ಡಾ. ಕೆ. ಸುಧಾಕರ್

ಬೆಂಗಳೂರು: ಕೋವಿಡ್-19 ಎರಡನೇ ಅಲೆ ಅವಧಿಯಲ್ಲಿ ರಾಜ್ಯದಲ್ಲಿ ಮೃತಪಟ್ಟ ವೈದ್ಯರ ಸಂಖ್ಯೆ ಕಡಿಮೆ ಪ್ರಮಾಣದಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಎರಡನೇ ಅಲೆ ಅವಧಿಯಲ್ಲಿ ದೇಶದಲ್ಲಿ ಕೋವಿಡ್ -19 ಸಾಂಕ್ರಾಮಿಕದಿಂದ 646 ವೈದ್ಯರು ಮೃತಪಟ್ಟಿದ್ದಾರೆ. ಈ ಪೈಕಿಯಲ್ಲಿ ರಾಜ್ಯದ 9 ವೈದ್ಯರು ಅಸುನೀಗಿರುವುದಾಗಿ ಭಾರತೀಯ ವೈದ್ಯಕೀಯ ಸಂಘ ನೀಡಿರುವ ಪಟ್ಟಿಯನ್ನು ಟ್ವಿಟರ್ ನಲ್ಲಿ ಡಾ.ಕೆ.ಸುಧಾಕರ್ ಹಂಚಿಕೊಂಡಿದ್ದಾರೆ.

ಕೋವಿಡ್ ವಾರಿಯರ್ಸ್ ಗಳ ರಕ್ಷಣೆಯಲ್ಲಿ ನಮ್ಮ ಸರ್ಕಾರ ಕೈಗೊಂಡ ಮಹತ್ತರ ಹೆಜ್ಜೆಯಿಂದಾಗಿ ರಾಜ್ಯದಲ್ಲಿನ ವೈದ್ಯರ ಸಾವಿನ ಸಂಖ್ಯೆಯಲ್ಲಿ ಕಡಿಮೆಯಾಗಿರುವುದಾಗಿ ಸಚಿವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com