ಶಿವಮೊಗ್ಗ: ನಂಬರ್ ಪ್ಲೇಟ್ ಇಲ್ಲದಿರುವ ವಾಹನಗಳಲ್ಲಿ ಪ್ರಯಾಣ ಮಾಡಬಾರದು ಎಂದು ಸರ್ಕಾರದ ನಿಯಮವೇ ಇದೆ, ನಂಬರ್ ಪ್ಲೇಟ್ ಇಲ್ಲದಿರುವ ವಾಹನವನ್ನು ಚಲಾಯಿಸಿ ಸಿಕ್ಕಿಬಿದ್ದು ಅನೇಕರು ದಂಡ ಕಟ್ಟಿಸಿಕೊಳ್ಳುವುದೂ ಇದೆ.
ಆದರೆ ಜನಸಾಮಾನ್ಯರಿಗೊಂದು ನ್ಯಾಯ, ಜನಪ್ರತಿನಿಧಿಗಳಿಗೊಂದು ನ್ಯಾಯ, ರಾಜಕಾರಣಿಗಳು ಏನು ಮಾಡಿದರೂ ನಡೆಯುತ್ತದೆ ಎಂಬಂತೆ ಹೇಳುವ ಘಟನೆಗಳು ಆಗಾಗ ನಡೆಯುತ್ತಿರುತ್ತವೆ.
ಇಂದು ಶಿವಮೊಗ್ಗದಲ್ಲಿ ನಗರಾಭಿವೃದ್ಧಿ ಸಚಿವ ಬಿ ಎ ಬಸವರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಪ್ರಯಾಣಿಸಿದ ಕಾರಿನಲ್ಲಿ ನಂಬರ್ ಪ್ಲೇಟ್ ಇರಲಿಲ್ಲ. ಇಬ್ಬರೂ ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಹೋಗಿದ್ದು ಅದು ನಮ್ಮ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ಪ್ರತಿನಿಧಿಗೆ ಲಭ್ಯವಾಗಿದೆ.
Advertisement