ಸಿಡಿ ಕೇಸ್ ಯುವತಿಯಿಂದ ಅರ್ಜಿ: ಎಸ್ ಐಟಿ, ಮಾಜಿ ಸಚಿವ ಜಾರಕಿಹೊಳಿಗೆ ಹೈಕೋರ್ಟ್ ನೋಟಿಸ್

ಸಿಡಿ ಕೇಸ್ ಯುವತಿ ಸಲ್ಲಿಸಿದ ಅರ್ಜಿ ಕುರಿತು ಈ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ವಿಶೇಷ ತನಿಖಾ ತಂಡಕ್ಕೆ (ಎಸ್ ಐಟಿ) ಹೈಕೋರ್ಟ್ ಸೋಮವಾರ ನೋಟಿಸ್ ನೀಡಿದೆ
ರಮೇಶ್ ಜಾರಕಿಹೊಳಿ
ರಮೇಶ್ ಜಾರಕಿಹೊಳಿ

ಬೆಂಗಳೂರು: ಸಿಡಿ ಕೇಸ್ ಯುವತಿ ಸಲ್ಲಿಸಿದ ಅರ್ಜಿ ಕುರಿತು ಈ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ವಿಶೇಷ ತನಿಖಾ ತಂಡಕ್ಕೆ (ಎಸ್ ಐಟಿ) ಹೈಕೋರ್ಟ್ ಸೋಮವಾರ ನೋಟಿಸ್ ನೀಡಿದೆ. 

ಐಸ್ ಐಟಿ ಮೇಲೆ ಆರೋಪಿ ಪ್ರಭಾವ ಬೀರಿದ್ದು, ಆತನನ್ನು ರಕ್ಷಿಸಲಾಗುತ್ತಿದೆ. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಜಾರಕಿಹೊಳಿ ಹನಿಟ್ರ್ಯಾಪ್ ಪ್ರಕರಣ ದಾಖಲಿಸಿ, ತನ್ನನ್ನು ಆರೋಪಿ ಎಂಬಂತೆ ಬಿಂಬಿಸಲಾಗುತ್ತಿದೆ. ಚಾರಿತ್ರ್ಯವಧೆ ಮಾಡಲಾಗುತ್ತಿದೆ ಎಂದು ಯುವತಿ ಅಪಾದಿಸಿದ್ದಾಳೆ.

ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಮುಂಚಿತವಾಗಿಯೇ ದಾಖಲಿಸಿರುವ ರೇಪ್ ಕೇಸಿನ ತನಿಖೆಯ ಹಾದಿ ತಪ್ಪಿಸಲು ಇದೊಂದು ಮಾರ್ಗವಾಗಿದೆ ಎಂದು ಯುವತಿ ಆರೋಪಿಸಿದ್ದಾಳೆ. ಎಫ್ ಐಆರ್ ರದ್ದುಪಡಿಸಬೇಕು ಮತ್ತು ಆತ ಸಲ್ಲಿಸಿರುವ ದೂರಿನ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳುವಂತೆ ಆಕೆ ನ್ಯಾಯಾಲಯದಲ್ಲಿ ಮನವಿ ಮಾಡಿಕೊಂಡಿದ್ದಾಳೆ.

ಯುವತಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ಎಸ್ ದತ್ ಯಾದವ್, ಮಾಜಿ ಸಚಿವ ಜಾರಕಿಹೊಳಿ ಮತ್ತು ಎಸ್ ಐಟಿಗೆ ನೋಟಿಸ್ ಜಾರಿ ಮಾಡಿ ಮುಂದಿನ ವಿಚಾರಣೆಯನ್ನು ಜೂನ್ 21ಕ್ಕೆ ಮುಂದೂಡಿದೆ.

ಮೊದಲಿಗೆ ಸೆಕ್ಸ್ ಸಿಡಿಯಲ್ಲಿರುವುದು ನಾನಲ್ಲ, ಅದು ನಕಲಿಯಾಗಿದೆ, ತನ್ನ ಫೋಟೋವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಆಕೆಯೊಂದಿಗೆ ಯಾವುದೇ ರೀತಿಯ ಸಂಬಂಧ ಇಲ್ಲ ಎಂದು ಹೇಳುತ್ತಿದ್ದ ಆರೋಪಿ, ಎರಡು ತಿಂಗಳ ನಂತರ ಇದ್ದಕ್ಕಿದ್ದಂತೆ ಎಸ್ ಐಟಿ ಅಧಿಕಾರಿಗಳ ಮುಂದೆ ಹಾಜರಾಗಿ ವಿಡಿಯೋದಲ್ಲಿರುವುದು ನಾನೇ, ಆಕೆಯೊಂದಿಗೆ ಸಹಮತದ ಸೆಕ್ಸ್ ನಡೆದಿದೆ ಎಂದು ಹೇಳಿದ್ದರು. ಅವರ ಹೇಳಿಕೆ ಈ ಹಿಂದಿನ ಹೇಳಿಕೆಗಿಂತ ಸಂಪೂರ್ಣವಾಗಿ ವಿರುದ್ಧವಾಗಿದೆ ಎಂದು ಪ್ರಾಥಮಿಕ ವಿಚಾರಣೆ ವೇಳೆಯಲ್ಲಿ ಆಕೆ ಆರೋಪಿಸಿದ್ದಳು.

ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯದ ಮುಂದೆ ಎಸ್ ಐಟಿ ಸಲ್ಲಿಸಿದ ಆಕ್ಷೇಪಗಳಿಗೆ ಪ್ರತಿಕ್ರಿಯಿಸಿದ ಯುವತಿ, ತನಿಖೆ ನಡೆಸುತ್ತಿರುವ ಎಸ್ ಐಟಿ ಈ ಪ್ರಕರಣವನ್ನು ಮುಚ್ಚಿಹಾಕಲು ಕಾನೂನಾತ್ಮಕ ವೇದಿಕೆಯನ್ನಾಗಿ ಮಾಡಿಕೊಳ್ಳುತ್ತಿದೆ. ಇದು ಕಾನೂನಿನ ಪ್ರಕ್ರಿಯೆಯ ದುರುಪಯೋಗವಾಗಿದೆ ಮತ್ತು ಅದನ್ನು ರದ್ದುಗೊಳಿಸುವ ಹೊಣೆಗಾರಿಕೆ ಇದೆ ಎಂದು ನ್ಯಾಯಾಲಯದ ಮುಂದೆ ಮನವಿ ಮಾಡಿಕೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com