ಕೋವಿಡ್ ಸೆಸ್: 7 ರಾಜ್ಯಗಳ ಹಣಕಾಸು ಸಚಿವರೊಂದಿಗೆ ಬೊಮ್ಮಾಯಿ ಸಭೆ

ಕೋವಿಡ್ ಸೆಸ್ ಸಂಗ್ರಹಿಸುವಂತೆ ಸಿಕ್ಕಿಂ ರಾಜ್ಯ ಸಲಹೆ ನೀಡಿದ್ದ ಹಿನ್ನೆಲೆಯಲ್ಲಿ ಈ ಕುರಿತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ 7 ರಾಜ್ಯಗಳ ಹಣಕಾಸು ಸಚಿವರೊಂದಿಗೆ ವರ್ಚುವಲ್ ಸಭೆ ನಡೆಸಿ ಮಾತುಕತೆ ನಡೆಸಿದರು.
ಸಚಿವ ಬಸವರಾಜ ಬೊಮ್ಮಾಯಿ
ಸಚಿವ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕೋವಿಡ್ ಸೆಸ್ ಸಂಗ್ರಹಿಸುವಂತೆ ಸಿಕ್ಕಿಂ ರಾಜ್ಯ ಸಲಹೆ ನೀಡಿದ್ದ ಹಿನ್ನೆಲೆಯಲ್ಲಿ ಈ ಕುರಿತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ 7 ರಾಜ್ಯಗಳ ಹಣಕಾಸು ಸಚಿವರೊಂದಿಗೆ ವರ್ಚುವಲ್ ಸಭೆ ನಡೆಸಿ ಮಾತುಕತೆ ನಡೆಸಿದರು.

ಸಾಂಕ್ರಾಮಿಕ ರೋಗದಿಂದಾಗಿ ಸುಮಾರು ಶೇ.30 ನಷ್ಟು ಆದಾಯದ ಕೊರತೆಯನ್ನು ನೀಗಿಸಲು ಸಿಕ್ಕಿಂ ಪ್ರಸ್ತಾಪಿಸಿದ ತೆರಿಗೆ ಹೆಚ್ಚಳ ಕುರಿತು ಚರ್ಚಿಸಲು ಈ ಸಭೆಯನ್ನು ಕರೆಯಲಾಗಿತ್ತು

ಸಭೆಯಲ್ಲಿ ದೆಹಲಿ, ಕೇರಳ, ಛತ್ತೀಸ್ಗಢ, ಉತ್ತರ ಪ್ರದೇಶ, ಕರ್ನಾಟಕ, ಒಡಿಶ್ಸಾ ಮತ್ತು ಸಿಕ್ಕಿಂ ಸೇರಿದಂತೆ ಏಳು ರಾಜ್ಯಗಳ ಹಣಕಾಸು ಸಚಿವರು ಸಿಕ್ಕಿಂ ರಾಜ್ಯದೊಳಗಿನ ಔಷಧ ಮತ್ತು ವಿದ್ಯುತ್ ಮೇಲಿನ ತೆರಿಗೆಯನ್ನು ಹೆಚ್ಚಿಸುವ ಪ್ರಸ್ತಾಪದ ಬಗ್ಗೆ ಚರ್ಚೆ ನಡೆಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com