ಕಾಂಗ್ರೆಸ್ ಬಗ್ಗೆ ಅಪಪ್ರಚಾರ: ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು

ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಚಕ್ರವರ್ತಿ ಸೂಲಿಬೆಲೆ
ಚಕ್ರವರ್ತಿ ಸೂಲಿಬೆಲೆ

ಬೆಂಗಳೂರು: ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 

ಕಾಂಗ್ರೆಸ್​ ಪಕ್ಷದ ವಿರುದ್ಧ ಸೂಲಿಬೆಲೆ ಸುಳ್ಳು ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಹನುಮಂತನಗರ ಬ್ಲಾಕ್ ಕಾಂಗ್ರೆಸ್ ಮುಖಂಡ ತೇಜೇಶ್ ಕುಮಾರ್ ದೂರು ನೀಡಿದ್ದಾರೆ.

ಜೂ. 7 ರಂದು ಸಾಮಾಜಿಕ ಜಾಲತಾಣದಲ್ಲಿ ಒಂದನ್ನು ಹಾಕಿದ್ದ ಚಕ್ರವರ್ತಿ ಸೂಲಿಬೆಲೆ, "ಕಾಂಗ್ರೆಸ್​ ಆಕ್ಸಿಜನ್ ಅಕ್ರಮ ದಾಸ್ತಾನು ಮಾಡಿ ಜನರಿಗೆ ಸಿಗದ ಹಾಗೆ ಮಾಡಿತು. ಅಮಾಯಕರ ಸಾವನ್ನು ಸಂಭ್ರಮಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮಾನ ಹರಾಜು ಹಾಕಿತು" ಎಂದಿದ್ದಾರೆ. ಇದು ಸುಳ್ಳಾರೋಪವಾಗಿದ್ದು, ಈ ಮೂಲಕ ಪಕ್ಷಕ್ಕೆ ಕೆಟ್ಟ ಹೆಸರು ತರಿಸಲಾಗುತ್ತಿದೆ ಎಂದು ತೇಜೇಶ್ ಕುಮಾರ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com