ಕೋವಿಡ್-19: ರಾಜ್ಯದಲ್ಲಿ 34 ಸಾವಿರ ಗಡಿ ದಾಟಿದ ಸಾವಿನ ಸಂಖ್ಯೆ

ರಾಜ್ಯದಲ್ಲಿ ಕೋವಿಡ್ ಸೋಂಕು ಇಳಿಕೆಯಾಗುತ್ತಿದ್ದರೂ, ಸಾವಿನ ಸಂಖ್ಯೆ ಮಾತ್ರ ಆತಂಕಕಾರಿ ರೀತಿಯಲ್ಲಿ ಏರಿಕೆಯಾಗುತ್ತಲೇ ಇದೆ. ನಿನ್ನೆ ಒಂದೇ ದಿನ ರಾಜ್ಯದಲ್ಲಿ 142 ಮಂದಿ ಸೋಂಕಿತರು ಮಹಾಮಾರಿ ವೈರಸ್'ಗೆ ಬಲಿಯಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 34 ಸಾವಿರ ಗಡಿ ದಾಟಿ 34,025ಕ್ಕೆ ತಲುಪಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ಇಳಿಕೆಯಾಗುತ್ತಿದ್ದರೂ, ಸಾವಿನ ಸಂಖ್ಯೆ ಮಾತ್ರ ಆತಂಕಕಾರಿ ರೀತಿಯಲ್ಲಿ ಏರಿಕೆಯಾಗುತ್ತಲೇ ಇದೆ. ನಿನ್ನೆ ಒಂದೇ ದಿನ ರಾಜ್ಯದಲ್ಲಿ 142 ಮಂದಿ ಸೋಂಕಿತರು ಮಹಾಮಾರಿ ವೈರಸ್'ಗೆ ಬಲಿಯಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 34 ಸಾವಿರ ಗಡಿ ದಾಟಿ 34,025ಕ್ಕೆ ತಲುಪಿದೆ. 

ಇನ್ನು 24 ಗಂಟೆಗಳಲ್ಲಿ 4,867 ಮಂದಿಯಲ್ಲಿ ಸೋಂಕು ಪತ್ತೆಯಾಗುವುದರೊಂದಿಗೆ ಸಾವಿನ ಸಂಖ್ಯೆ 28,11,320ಕ್ಕೆ ಏರಿಕೆಯಾಗಿದೆ. ಈ ನಡುವೆ ಗುಣಮುಖರ ಪ್ರಮಾಣ ಶೇ.94.27 ರಿಂದ ಶೇ.94.40ಕ್ಕೆ ಏರಿಕೆಯಾಗಿದೆ. ಇನ್ನು ಸಾವಿನ ಪ್ರಮಾಣ ಶೇ.1.20ರಿಂದ ಸೇ.1.21ಕ್ಕೆ ತಲುಪಿದೆ. 

ಈ ನಡುವೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ 1,034 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 12,06,293ಕ್ಕೆ ಏರಿಕೆಯಾಗಿದೆ. ಗುಣಮುಖರ ಪ್ರಮಾಣ ಸೇ.92.88ಕ್ಕೆ ಏರಿಕೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com