ಬೆಂಗಳೂರು: ಕದ್ದ ವಸ್ತುವನ್ನು ರಸ್ತೆ ಬದಿ ಮಾರುತ್ತಿದ್ದ ಕಳ್ಳನ ಬಂಧನ. 7.60 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಮನೆಗಳಲ್ಲಿ ಕದ್ದ ಆಭರಣದ ವಸ್ತುಗಳನ್ನು ರಸ್ತೆಯ ಬದಿ ಮಾರಾಟ ಮಾಡುತ್ತಿದ್ದ ಮನೆಗಳ್ಳನೋರ್ವನನ್ನು ಮಾಗಡಿ ರೋಡ್ ಪೊಲೀಸರು ಬಂಧಿಸಿದ್ದಾರೆ.
ವಶಕ್ಕೆ ಪಡೆಯಲಾದ ಸ್ವತ್ತುಗಳೊಂದಿಗೆ ಆರೋಪಿ
ವಶಕ್ಕೆ ಪಡೆಯಲಾದ ಸ್ವತ್ತುಗಳೊಂದಿಗೆ ಆರೋಪಿ

ಬೆಂಗಳೂರು: ಮನೆಗಳಲ್ಲಿ ಕದ್ದ ಆಭರಣದ ವಸ್ತುಗಳನ್ನು ರಸ್ತೆಯ ಬದಿ ಮಾರಾಟ ಮಾಡುತ್ತಿದ್ದ ಮನೆಗಳ್ಳನೋರ್ವನನ್ನು ಮಾಗಡಿ ರೋಡ್ ಪೊಲೀಸರು ಬಂಧಿಸಿದ್ದಾರೆ.

ಸೈಯದ್ ರಫಿ ಬಂಧಿತ ಆರೋಪಿ .

ಆರೋಪಿ ಸೈಯದ್ ರಫಿ ಕಳ್ಳತನ ಮಾಡಿದ ಬೆಳ್ಳಿ ಆಭರಣಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ಅನುಮಾನದಿಂದ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಬೆಳ್ಳಿ ಆಭರಣಗಳನ್ನು ಕಳ್ಳತನ ಮಾಡಿ ಮಾರಾಟ ಮಾಡುತ್ತಿರುವ ಕುರಿತು ಬಾಯ್ಬಿಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯಿಂದ 7.8 ಲಕ್ಷ ಮೌಲ್ಯದ 124 ಗ್ರಾಂ ಚಿನ್ನಾಭರಣ ಹಾಗೂ 2 ಕೆಜಿ ಬೆಳ್ಳಿ ಆಭರಣಗಳನ್ನ ವಶಕ್ಕೆ ಪಡೆಯಲಾಗಿದೆ. ಬಂಧಿತನ ವಿರುದ್ಧ ಮಾಗಡಿ ರಸ್ತೆ ಠಾಣೆಯಲ್ಲಿ 2 ಕೇಸ್, ಬ್ಯಾಡರಹಳ್ಳಿಯಲ್ಲಿ 3, ಬಸವೇಶ್ವರ ನಗರ ಠಾಣೆಯಲ್ಲಿ 1ಕೇಸ್ ದಾಖಲಾಗಿರುವುದು ಳಿದುಬಂದಿದೆ. ಹೆಚ್ಚಿನ ವಿಚಾರಣೆ ಬಳಿಕ ಕ್ರಮ ತೆಗೆದುಕೊಳ್ಳುವುದಾಗಿ ಪೋಲೀಸರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com