ಆರೋಗ್ಯ ಇಲಾಖೆಯ ಸಲಹೆಯಂತೆಯೇ ಪರೀಕ್ಷಾ ದಿನಾಂಕ ಘೋಷಣೆ ಮಾಡಲಾಗಿದೆ: ಎಸ್. ಸುರೇಶ್ ಕುಮಾರ್

ಆರೋಗ್ಯ ಇಲಾಖೆಯ ಸಲಹೆಯಂತೆಯೇ ಪರೀಕ್ಷಾ ದಿನಾಂಕಗಳ ಘೋಷಣೆ ಮಾಡಲಾಗಿದೆ. ಇದಕ್ಕೆ ಮುಖ್ಯಮಂತ್ರಿಗಳ ಅನುಮತಿ ಕೂಡ ಪಡೆಯಲಾಗಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಸುರೇಶ್ ಕುಮಾರ್
ಸುರೇಶ್ ಕುಮಾರ್

ಬೆಂಗಳೂರು: ಎಸ್ಎಸ್ಎಲ್ ಸಿ ಪರೀಕ್ಷೆ ಕುರಿತು ತಮ್ಮೊಂದಿಗೆ ಚರ್ಚಿಸಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್, ಆರೋಗ್ಯ ಇಲಾಖೆಯ ಸಲಹೆಯಂತೆಯೇ ಪರೀಕ್ಷಾ ದಿನಾಂಕಗಳ ಘೋಷಣೆ ಮಾಡಲಾಗಿದೆ. ಇದಕ್ಕೆ ಮುಖ್ಯಮಂತ್ರಿಗಳ ಅನುಮತಿ ಕೂಡ ಪಡೆಯಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಆರೋಗ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳ ಸಮ್ಮುಖದಲ್ಲಿ  ಸಭೆ  ನಡೆಸಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳ ಪ್ರಮಾಣಿತ ಕಾರ್ಯಚರಣಾ ವಿಧಾನಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಗಿದೆ ಎಂದು ತಿಳಿಸಿದರು.

ಅಲ್ಲದೇ  ಜಿಲ್ಲಾಧಿಕಾರಿಗಳ ವಿಡಿಯೋ ಸಂವಾದದಲ್ಲಿ ಕೂಡ  ಆರೋಗ್ಯ ಇಲಾಖೆಯ ಆಯುಕ್ತರು  ಪಾಲ್ಗೊಂಡಿದ್ದು, ಲಾಖೆಯು ನೀಡಿರುವ ಎಸ್.ಓ.ಪಿ ಅನುಸರಣೆಗೆ ಬೇಕಾದ ಸಿದ್ಧತೆಗಳ ಕುರಿತು ತಮ್ಮ ಅಭಿಪ್ರಾಯವನ್ನು ಎಲ್ಲ ಜಿಲ್ಲಾಡಳಿತಗಳೊಂದಿಗೆ ಹಂಚಿಕೊಂಡಿದ್ದಾರೆ.ಹಾಗೆಯೇ ಮುಖ್ಯಮಂತ್ರಿಗಳನ್ನು ಸಭೆಗೆ ಮುನ್ನ ಖುದ್ದಾಗಿ ಭೇಟಿ ಮಾಡಿ ಪರೀಕ್ಷಾ ದಿನಾಂಕ ಪ್ರಕಟಣೆಗೆ ಮೌಖಿಕ ಒಪ್ಪಿಗೆ ಪಡೆಯಲಾಗಿದೆ ಎಂದು ಸುರೇಶ್ ಕುಮಾರ್ ವಿವರಣೆ ನೀಡಿದ್ದಾರೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com