ಉಣ್ಣುವ ಕೈಗಳಿಗೆ, ಮನೆಗಳ-ದೇಶದ ಅಭಿವೃದ್ಧಿಗೆ ದೈಹಿಕವಾಗಿ ಮತ್ತು ಮಾನಸಿಕವಾಗಿ ದುಡಿಯುವ ಕೈಗಳೇ ಆಧಾರ: ಎಚ್ ಡಿಕೆ

ದೇಶದೆಲ್ಲೆಡೆ ಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಗ್ತಿದೆ. ವಿವಿಧ ಸ್ತರಗಳಲ್ಲಿ ದುಡಿದು ದೇಶದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಕಾರ್ಮಿಕ ವರ್ಗಕ್ಕೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಶುಭಾಶಯ ಕೋರಿದ್ದಾರೆ..
ಕುಮಾರಸ್ವಾಮಿ
ಕುಮಾರಸ್ವಾಮಿ

ಬೆಂಗಳೂರು:  ದೇಶದೆಲ್ಲೆಡೆ ಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಗ್ತಿದೆ. ವಿವಿಧ ಸ್ತರಗಳಲ್ಲಿ ದುಡಿದು ದೇಶದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಕಾರ್ಮಿಕ ವರ್ಗಕ್ಕೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಶುಭಾಶಯ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಉಣ್ಣುವ ಕೈಗಳಿಗೆ, ಮನೆಗಳ ಅಭಿವೃದ್ಧಿಗೆ, ದೇಶದ ಅಭಿವೃದ್ಧಿಗೆ ದೈಹಿಕವಾಗಿ ಮತ್ತು ಮಾನಸಿಕವಾಗಿ ದುಡಿಯುವ ಕೈಗಳೇ ಆಧಾರ. ಅಂತಹ ವಿವಿಧ ಸ್ತರಗಳಲ್ಲಿ ದುಡಿಯುತ್ತಿರುವ ಎಲ್ಲಾ ಕಾರ್ಮಿಕ ವರ್ಗಕ್ಕೆ ವಿಶ್ವ ಕಾರ್ಮಿಕ ದಿನಾಚರಣೆಯ ಶುಭಾಶಯಗಳು ಎಂದಿದ್ದಾರೆ.

ಅಲ್ಲದೇ, ಕಾರ್ಮಿಕರಿದ್ದರೆ ಮಾಲೀಕರಾಗೋದು, ಮಾಲೀಕ ಕಾರ್ಮಿಕ ಇಬ್ಬರೂ ಪರಸ್ಪರ ಪೂರಕವಾಗಿರಬೇಕು ಹಾಗಾಗಿ ಕಾರ್ಮಿಕರ ಶೋಷಣೆ ಕೊನೆಗೊಳ್ಳಲಿ. ಕೊರೊನಾ ಕಗ್ಗತ್ತಲು ಕಳೆದು ಕಾರ್ಮಿಕರ ಬಾಳಲ್ಲಿ ಹೊಸಬೆಳಕು ಮೂಡಲಿ. ಎಲ್ಲರ ಬದುಕು ಹಸನಾಗಲಿ. ಕಾರ್ಮಿಕ ದಿನಾಚರಣೆಯ ಸಂದರ್ಭದಲ್ಲಿ ಶುಭ ಹಾರೈಸುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com