ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ: 44,631 ಮಂದಿಗೆ ಪಾಸಿಟಿವ್; ಬೆಂಗಳೂರಿನಲ್ಲಿ 132 ಸೇರಿ 292 ಮಂದಿ ಸಾವು

ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಶನಿವಾರ ಒಂದೇ ದಿನ ಬರೋಬ್ಬರಿ 292 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 16538ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಶನಿವಾರ ಒಂದೇ ದಿನ ಬರೋಬ್ಬರಿ 292 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 16538ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ  44,631 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 16,90,934ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 20,870 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 8.40,274ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 132 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 24714 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 12,10013ಕ್ಕೆ ಏರಿಕೆಯಾಗಿದೆ. ಇನ್ನು 4,64,363 ಸಕ್ರೀಯ ಪ್ರಕರಣಗಳಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com