ಚಿಕ್ಕಮಗಳೂರು ಕೋವಿಡ್ ಪರಿಸ್ಥಿತಿ ಪರಿಶೀಲಿಸಿದ ಶಾಸಕ ಸಿ.ಟಿ. ರವಿ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿಟಿ ರವಿ ಚಿಕ್ಕಮಗಳೂರಿನ ವಿವಿಧ ಆಸ್ಪತ್ರೆಗಳಿಗೆ ಭೇಟಿ ನೀಡಿ ಕೋವಿಡ್ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸಿದರು.
ಆಸ್ಪತ್ರೆಯಲ್ಲಿ ಸಿ.ಟಿ ರವಿ ಪರಿಶೀಲನೆ
ಆಸ್ಪತ್ರೆಯಲ್ಲಿ ಸಿ.ಟಿ ರವಿ ಪರಿಶೀಲನೆ

ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿಟಿ ರವಿ ಚಿಕ್ಕಮಗಳೂರಿನ ವಿವಿಧ ಆಸ್ಪತ್ರೆಗಳಿಗೆ ಭೇಟಿ ನೀಡಿ ಕೋವಿಡ್ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸಿದರು.

ಪಿಪಿಇ ಕಿಟ್ ಧರಿಸಿ ವಿವಿಧ ಆಸ್ಪತ್ರೆಗಳಿಗೆ ಭೇಟಿ ನೀಡಿದ ರವಿ ಕೋವಿಡ್ ಎರಡನೇ ಅಲೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುವಂತೆ ಸಿಬ್ಬಂದಿ ಮತ್ತು ಜಿಲ್ಲಾಡಳಿತಕ್ಕೆ ಸೂಚಿಸಿದರು. ಜಿಲ್ಲೆಯಲ್ಲಿ ಮೆಡಿಕಲ್ ಆಕ್ಸಿಜನ್ ಕೊರತೆಯಿಲ್ಲ, ಏಕೆಂದರೆ ಕೊರೋನಾ ಮೊದಲ ಅಲೆಯಲ್ಲಿಯೇ ಜಿಲ್ಲೆಯಲ್ಲಿ ಆಕ್ಸಿಜನ್ ಘಟಕ ಸ್ಥಾಪಿಸಲಾಗಿತ್ತು.

ಪ್ರತಿನಿತ್ಯ ಕೋವಿಡ್ ವಾರ್ ರೂಂ ನ ಸಿಬ್ಬಂದಿ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ಹೇಳಿದ್ದಾರೆ.  ಚಾಮರಾಜನಗರ ದುರಂತದ ನಂತರ ಎಲ್ಲಾ ಸಚಿವರುಗಳಿಗೂ ತಮ್ಮ ತಮ್ಮ ಜಿಲ್ಲೆಯ ಕೋವಿಡ್ ಪರಿಸ್ಥಿತಿ ಪರಿಶೀಲನೆ ನಡೆಸುವಂತೆ ಸಿಎಂ ಯಡಿಯೂರಪ್ಪ ನಿರ್ದೇಶನ ನೀಡಿದ್ದರು.

ಕೊರೋನಾ ಸಾಂಕ್ರಾಮಿಕ ರೋಗವನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕಾಗಿದೆ, ಇಲ್ಲದಿದ್ದರೇ ಸರ್ಕಾರದ ವರ್ಚಸ್ಸಿಗೆ ಧಕ್ಕೆಯಾಗಲಿದೆ ಎಂದು ಸಿಎಂ ಯಡಿಯೂರಪ್ಪ ಅವರಿಗೆ ಸಿಟಿ ರವಿ ಪತ್ರ ಬರೆದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com