ಹಿರಿಯ ರಾಜಕಾರಣಿ ಕೆ.ಬಿ.ಶಾಣಪ್ಪ ಕೊರೋನಾಗೆ ಬಲಿ, ಗಣ್ಯರ ಸಂತಾಪ

ಮಾಜಿ ಸಚಿವ ಕೆ. ಬಿ.ಶಾಣಪ್ಪ ಕೋವಿಡ್-19 ಸೋಂಕಿನಿಂದ ಇಂದು ಮೃತಪಟ್ಟಿದ್ದಾರೆ. ಸಚಿವರಾಗಿ, ರಾಜ್ಯಸಭಾ ಸದಸ್ಯರಾಗಿ, ವಿಧಾನ ಪರಿಷತ್  ಸದಸ್ಯರಾಗಿ ಕಾರ್ಯನಿರ್ವಹಿಸಿದ್ದ ಅವರು ಕಲ್ಯಾಣ ಕರ್ನಾಟಕ ಭಾಗದ  ಪ್ರಭಾವಿ ದಲಿತ ನಾಯಕರಾಗಿದ್ದರು.
ಹಿರಿಯ ರಾಜಕಾರಣಿ ಕೆ. ಬಿ. ಶಾಣಪ್ಪ
ಹಿರಿಯ ರಾಜಕಾರಣಿ ಕೆ. ಬಿ. ಶಾಣಪ್ಪ

ಬೆಂಗಳೂರು: ಮಾಜಿ ಸಚಿವ ಕೆ. ಬಿ.ಶಾಣಪ್ಪ ಕೋವಿಡ್-19 ಸೋಂಕಿನಿಂದ ಇಂದು ಮೃತಪಟ್ಟಿದ್ದಾರೆ. ಸಚಿವರಾಗಿ, ರಾಜ್ಯಸಭಾ ಸದಸ್ಯರಾಗಿ, ವಿಧಾನ ಪರಿಷತ್  ಸದಸ್ಯರಾಗಿ ಕಾರ್ಯನಿರ್ವಹಿಸಿದ್ದ ಅವರು ಕಲ್ಯಾಣ ಕರ್ನಾಟಕ ಭಾಗದ  ಪ್ರಭಾವಿ ದಲಿತ ನಾಯಕರಾಗಿದ್ದರು.

ಅವರ ನಿಧನದಿಂದ ಒಬ್ಬ ನೇರ ನಿಷ್ಠುರ ಸ್ವಭಾವದ ನಾಯಕರನ್ನು ಕಳೆದುಕೊಂಡಂತಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. 

ಹಿರಿಯ ಮುತ್ಸದ್ಧಿ ರಾಜಕಾರಣಿ ಕೆ. ಬಿ. ಶಾಣಪ್ಪನವರು ಕೊರೊನಾ ಸೋಂಕಿನಿಂದ ನಿಧನರಾದ ಸುದ್ದಿ ಮನಸ್ಸಿಗೆ ಅತೀವ ದುಃಖವನ್ನುಂಟು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com