ಕೊರೋನಾ ಮೂರನೇ ಅಲೆಯಲ್ಲಿ ನೀವು ಉಳಿತಿರೋ ಇಲ್ಲವೋ ಗೊತ್ತಿಲ್ಲ, ನಾನಂತೂ ಬದುಕಬೇಕು: ಮತ್ತೆ 'ಕತ್ತಿ' ವರಸೆ

ಕೊರೋನಾ ಮೂರನೇ ಅಲೆ ಬರುತ್ತೆ, ನಾವು, ನೀವು ಉಳಿಯಬೇಕು. ನೀವು ಉಳಿಯುತ್ತೀರೋ ಇಲ್ಲವೋ ಗೊತ್ತಿಲ್ಲ, ನಾನಂತೂ ಉಳಿಯಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ ಕತ್ತಿ ಹೇಳಿಕೆ ನೀಡಿದ್ದಾರೆ.
ಉಮೇಶ್ ಕತ್ತಿ
ಉಮೇಶ್ ಕತ್ತಿ

ಬಾಗಲಕೋಟೆ: ಕೊರೋನಾ ಮೂರನೇ ಅಲೆ ಬರುತ್ತೆ, ನಾವು, ನೀವು ಉಳಿಯಬೇಕು. ನೀವು ಉಳಿಯುತ್ತೀರೋ ಇಲ್ಲವೋ ಗೊತ್ತಿಲ್ಲ, ನಾನಂತೂ ಉಳಿಯಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ ಕತ್ತಿ ಮತ್ತೆ ವಿವಾದಾಸ್ಪದ ಹೇಳಿಕೆ ನೀಡಿದ್ದಾರೆ.  

ರಬಕವಿ- ಬನಹಟ್ಟಿನಗರದಲ್ಲಿ ಶನಿವಾರ ನಡೆದ ಸರ್ಕಾರಿ ಹಾಗೂ ಖಾಸಗಿ ವೈದ್ಯರ ಸಭೆಯಲ್ಲಿ ಸಚಿವ ಕತ್ತಿ ಮಾತನಾಡಿದರು. ಮೂರನೇ ಅಲೆಗೆ ಆಕ್ಸಿಜನ್ ಸಾಂದ್ರಕ ಯಂತ್ರಗಳನ್ನು ಸರ್ಕಾರ ಹೆಚ್ಚು ನೀಡಬೇಕು ಎಂದು ವೈದ್ಯರು ಒತ್ತಾಯಿಸಿದರು. 

ಈ ವೇಳೆ ಪ್ರತಿಕ್ರಿಯಿಸಿದ ಸಚಿವರು ಮೂರನೇ ಅಲೆ  ಬಂದಾಗ ನೋಡೋಣ ಎಂದರು, ಇದಕ್ಕೆ ಉತ್ತರಿಸಿದ ವೈದ್ಯರು ನಾವು ಉಳಿದರೇ ನೋಡೋಣ ಎಂದಾಗ, ನೀವು ಉಳಿಯಿತ್ತಿರೋ ಇಲ್ಲವೋ ನಾನಂತು ಉಳಿಯಬೇಕು ಎಂದು ಉಮೇಶ್ ಕತ್ತಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com