ಬೆಂಗಳೂರು: ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಕ್ಲೀನ್ ಚೀಟ್ ನೀಡಲಾಗಿದೆ.
ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂದಿಸಿದ್ದಂತೆ ತನಿಖೆ ನಡೆಸಲು ಹೈಕೋರ್ಟ್ ಸದಸ್ಯರ ಸಮಿತಿ ನೇಮಿಸಿತ್ತು. ಚಾಮರಾಜ ನಗರಕ್ಕೆ ಆಮ್ಲಜನಕ ಸಾಗಿಸಲು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಡೆ ಒಡ್ಡಿದ್ದಾರೆ ಎಂಬ ಆರೋಪಿಸಲಾಗಿತ್ತು.
ಪ್ರಕರಣ ಸಂಬಂಧ ಇದೀಗ ತನಿಖಾ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ರೋಹಿಣಿ ಸಿಂಧೂರಿ ಆಮ್ಲಜನಕ ಪೂರೈಕೆಗೆ ತಡೆಯೊಡಿದ್ದಾರೆ ಎಂಬುದಕ್ಲೆ ಯಾವುದೇ ಸಾಕ್ಷ್ಯಾಧಾರ ಇಲ್ಲ.
ಮೈಸೂರು ಜಿಲ್ಲಾಧಿಕಾರಿ ವಿರುದ್ಧ ಆರೋಪ ಸಾಬೀತುಪಡಿಸುವ ಯಾವುದೇ ದಾಖಲೆಗಳಿಲ್ಲ. ಚಾಮರಾಜನಗರ ಜಿಲ್ಲೆ ಸೇರಿ ಯಾವುದೇ ಜಿಲ್ಲೆಗೆ ಆಮ್ಲಜನಕ ಪೂರೈಸಲು ರೋಹಿಣಿ ಸಿಂಧೂರಿ ತಡೆದಿದ್ದಾರೆ ಎಂದು ಹೇಳಲು ಆಗುವುದಿಲ್ಲ ಎಂದು ಸಮಿತಿ ತಿಳಿಸಿದೆ.
Advertisement